ಸಂಗ್ರಹ ಚಿತ್ರ 
ರಾಜ್ಯ

ಮಲ್ಯ ಆಸ್ಪತ್ರೆ ಬಳಿ ನಲಪಾಡ್ ಗ್ಯಾಂಗ್ ನನ್ನ ಮೇಲೂ ಹಲ್ಲೆ ಮಾಡಿತ್ತು: ವಿದ್ವತ್ ಸಹೋದರನ ಹೇಳಿಕೆ

ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥ ವಿದ್ವತ್ ಸಹೋದರ ಸಾತ್ವಿಕ್ ಪೊಲೀಸರ ಬಳಿ ಹೇಳಿಕೆ ದಾಖಲಿಸಿದ್ದು, ತನ್ನ ಮೇಲೂ ನಲಪಾಡ್ ಗ್ಯಾಂಗ್ ಹಲ್ಲೆ ಮಾಡಿತು ಎಂದು ಹೇಳಿದ್ದಾರೆ.

ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥ ವಿದ್ವತ್ ಸಹೋದರ ಸಾತ್ವಿಕ್ ಪೊಲೀಸರ ಬಳಿ ಹೇಳಿಕೆ ದಾಖಲಿಸಿದ್ದು, ತನ್ನ ಮೇಲೂ ನಲಪಾಡ್ ಗ್ಯಾಂಗ್ ಹಲ್ಲೆ ಮಾಡಿತು ಎಂದು ಹೇಳಿದ್ದಾರೆ.
ಇಂದು ಸಿಸಿಬಿ ಅಧಿಕಾರಿಗಳ ಬಳಿ ತೆರಳಿ ಹೇಳಿಕೆ ದಾಖಲು ಮಾಡಿದ ವಿದ್ವತ್ ಸಹೋದ ಸಾತ್ವಿಕ್, "ನನ್ನ ತಮ್ಮನ ಮೇಲೆ ಮಾತ್ರವಲ್ಲ ನನ್ನ ಮೇಲೂ ನಲಪಾಡ್ ಮತ್ತು ಆತನ ಗ್ಯಾಂಗ್ ಹಲ್ಲೆ ಮಾಡಿತ್ತು. ಹಲ್ಲೆ ವಿಚಾರ ತಿಳಿದ ನಾನು ನೇರವಾಗಿ ವಿದ್ವತ್ ಚಿಕಿತ್ಸೆಗೆ ದಾಖಲಾಗಿದ್ದ ಮಲ್ಯ ಆಸ್ಪತ್ರೆಗೆ ತೆರಳಿದ್ದೆ.  ವಿದ್ವತ್ ನೋಡಲು ಆಸ್ಪತ್ರೆಗೆ ಬಂದಾಗ ಅಲ್ಲಿಗೂ ಆಗಮಿಸಿದ್ದ ನಲಪಾಡ್ ಗ್ಯಾಂಗ್ ನನ್ನ ಮೇಲೂ ಹಲ್ಲೆ ಮಾಡಿದರು ಎಂದು ಸಿಸಿಬಿ ಪೊಲೀಸರ ಮುಂದೆ ಆಸ್ಪತ್ರೆಯಲ್ಲಿ ನಡೆದ ಘಟನೆ ಬಗ್ಗೆ ಸಾತ್ವಿಕ್ ಮಾಹಿತಿ ನೀಡಿದ್ದಾರೆ.
ವಿದ್ವತ್ ಮೇಲೆ ಹಲ್ಲೆ ನಡೆದ ಬಳಿಕ ಆತನ ಸ್ನೇಹಿತರು ಫೋನ್ ಮಾಡಿ ನನಗೆ ವಿಷಯ ತಿಳಿಸಿದ್ದರು. ನಾನು ಸ್ಥಳಕ್ಕೆ ಬರುವಷ್ಟರಲ್ಲಿ ವಿದ್ವತ್‌ ನನ್ನು ಮಲ್ಯ ಅಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಗೆ ಬಂದಾಗ ನಲಪಾಡ್ ಹಾಗೂ ಅವನ ಗ್ಯಾಂಗ್ ಇಲ್ಲಿಗೂ ಬಂದಿದ್ದರು. ಈ ವೇಳೆ ಅವರು ಆಸ್ಪತ್ರೆಯಲ್ಲಿ ಗಲಾಟೆ ಮಾಡುತ್ತಿದ್ದಾಗ ನನ್ನ ಮೇಲೂ ಕಿರುಚಾಡಿದ್ದರು. ಇದಕ್ಕೆ ನಾನು ಪ್ರತಿರೋಧ ತೋರಿದಾಗ ನನ್ನ ಮೇಲೆ ಕೈ ಮಾಡಿದರು ಎಂದು ಸಾತ್ವಿಕ್ ಹೇಳಿದ್ದಾರೆ.
ಇದೇ ಪ್ರಕರಣ ಸಂಬಂಧ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ ನಿನ್ನೆಯಷ್ಟೇ ವಿದ್ವತ್ ಹೇಳಿಕೆ ಪಡೆದಿದ್ದ ತನಿಖಾಧಿಕಾರಿಗಳು ನಂತರ ಸಾತ್ವಿಕ್ ಹೇಳಿಕೆಯನ್ನು ಪಡೆದಿದ್ದು ಅದನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣದ ಸಾಕ್ಷಿಯನ್ನಾಗಿ ಪರಿಗಣಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT