ವಿದ್ವತ್ ಮತ್ತು ಮೊಹಮದ್ ನಲಪಾಡ್ 
ರಾಜ್ಯ

ಮಲ್ಯ ಆಸ್ಪತ್ರೆಯಿಂದ ವಿದ್ವತ್ ಡಿಸ್ಚಾರ್ಜ್: ಹೈಕೋರ್ಟ್ ಮೊರೆ ಹೋಗಲು ನಲಪಾಡ್ ನಿರ್ಧಾರ

ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ ಪುತ್ರ ನಲಪಾಡ್ ಮೊಹಮದ್ ನಿಂದ ತೀವ್ರ ಹಲ್ಲೆಗೊಳಗಾಗಿದ್ದ ವಿದ್ವತ್ ಲೋಕನಾಥನ್ ಅವರನ್ನು ಮಲ್ಯ ಆಸ್ಪತ್ರೆಯಿಂದ ...

ಬೆಂಗಳೂರು: ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ ಪುತ್ರ ನಲಪಾಡ್ ಮೊಹಮದ್ ನಿಂದ ತೀವ್ರ ಹಲ್ಲೆಗೊಳಗಾಗಿದ್ದ ವಿದ್ವತ್ ಲೋಕನಾಥನ್ ಅವರನ್ನು ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ತೀವ್ರ ಹಲ್ಲೆಗೊಳಗಾಗಿದ್ದ ವಿದ್ವತ್ ಕಳೆದ 15 ದಿನಗಳಿಂದ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ಫೆಬ್ರವರಿ 17 ರಂದು ಹಲ್ಲೆಗೊಳಗಾಗಿದ್ದರು. 
ಆಸ್ಪತ್ರೆಗೆ ತೆರಳಿದ್ದ ಸಿಸಿಬಿ ಪೊಲೀಸರು ವಿದ್ವತ್ ಸಹೋದರ ಸಾತ್ವಿಕ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು. ಜೊತೆಗೆ ವಿದ್ವತ್ ಅವರ ಹೇಳಿಕೆಯನ್ನು ಪೊಲೀಸರು ಪಡೆದುಕೊಂಡಿದ್ದಾರೆ.
ನನ್ನ ತಮ್ಮನ ಮೇಲೆ ಮಾತ್ರವಲ್ಲ ನನ್ನ ಮೇಲೂ ನಲಪಾಡ್ ಮತ್ತು ಆತನ ಗ್ಯಾಂಗ್ ಹಲ್ಲೆ ಮಾಡಿತ್ತು. ಹಲ್ಲೆ ವಿಚಾರ ತಿಳಿದ ನಾನು ನೇರವಾಗಿ ವಿದ್ವತ್ ಚಿಕಿತ್ಸೆಗೆ ದಾಖಲಾಗಿದ್ದ ಮಲ್ಯ ಆಸ್ಪತ್ರೆಗೆ ತೆರಳಿದ್ದೆ.  ವಿದ್ವತ್ ನೋಡಲು ಆಸ್ಪತ್ರೆಗೆ ಬಂದಾಗ ಅಲ್ಲಿಗೂ ಆಗಮಿಸಿದ್ದ ನಲಪಾಡ್ ಗ್ಯಾಂಗ್ ನನ್ನ ಮೇಲೂ ಹಲ್ಲೆ ಮಾಡಿದರು ಎಂದು ಸಿಸಿಬಿ ಪೊಲೀಸರ ಮುಂದೆ ಆಸ್ಪತ್ರೆಯಲ್ಲಿ ನಡೆದ ಘಟನೆ ಬಗ್ಗೆ ಸಾತ್ವಿಕ್ ಮಾಹಿತಿ ನೀಡಿದ್ದಾರೆ ಹೀಗಾಗಿ ಸಾತ್ವಿಕ್ ಅವರನ್ನು ಪ್ರತ್ಯಕ್ಷ ಸಾಕ್ಷಿ ಎಂದು ಪರಿಗಣಿಸಬಹುದು ಎನ್ನಲಾಗಿದೆ.
ಇನ್ನೂ ಅದೀನ ನ್ಯಾಯಾಲಯದಲ್ಲಿ  ಮೊಹಮದ್ ಗೆ ಜಾಮೀನು ಸಿಗದ ಕಾರಣ ಇಂದು ಹೈಕೋರ್ಟ್ ಗೆ ಮೊರೆ ಹೋಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

ಈ ಬಾರಿಯ 'ಯುವ ದಸರಾ' ಉದ್ಘಾಟನೆಗೆ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವಗೆ ಆಹ್ವಾನ!

India without Politics: ‘ಹನುಮಾನ್ ಅಂಶ್’ ನೋಡಲು ಚಪ್ಪಲಿ ಬಿಚ್ಚಿ ಕುಳಿತ ಮುಸ್ಲಿಂ ವ್ಯಕ್ತಿ; video ವೈರಲ್

10 ದಿನಗಳ ಬಳಿಕ ಸುರಂಗದಿಂದ ಕಾರ್ಮಿಕರ ಪವಾಡ ಸದೃಶ ರಕ್ಷಣೆ; 'ಜಗತ್ತು ಈವರೆಗೆ ಕಂಡು ಕೇಳರಿಯದ ರಕ್ಷಣಾ ಕಾರ್ಯಾಚರಣೆ': ತಜ್ಞ Arnold Dix

'ಭಾರತ ಕೂಡ ಸೋತಿದೆ' ಎಂದ PCB: ಮೊಹ್ಸಿನ್ ನಕ್ವಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ Iceland Cricket Board