ವಿದ್ವತ್ ಮತ್ತು ಮೊಹಮದ್ ನಲಪಾಡ್ 
ರಾಜ್ಯ

ಮಲ್ಯ ಆಸ್ಪತ್ರೆಯಿಂದ ವಿದ್ವತ್ ಡಿಸ್ಚಾರ್ಜ್: ಹೈಕೋರ್ಟ್ ಮೊರೆ ಹೋಗಲು ನಲಪಾಡ್ ನಿರ್ಧಾರ

ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ ಪುತ್ರ ನಲಪಾಡ್ ಮೊಹಮದ್ ನಿಂದ ತೀವ್ರ ಹಲ್ಲೆಗೊಳಗಾಗಿದ್ದ ವಿದ್ವತ್ ಲೋಕನಾಥನ್ ಅವರನ್ನು ಮಲ್ಯ ಆಸ್ಪತ್ರೆಯಿಂದ ...

ಬೆಂಗಳೂರು: ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ ಪುತ್ರ ನಲಪಾಡ್ ಮೊಹಮದ್ ನಿಂದ ತೀವ್ರ ಹಲ್ಲೆಗೊಳಗಾಗಿದ್ದ ವಿದ್ವತ್ ಲೋಕನಾಥನ್ ಅವರನ್ನು ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ತೀವ್ರ ಹಲ್ಲೆಗೊಳಗಾಗಿದ್ದ ವಿದ್ವತ್ ಕಳೆದ 15 ದಿನಗಳಿಂದ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ಫೆಬ್ರವರಿ 17 ರಂದು ಹಲ್ಲೆಗೊಳಗಾಗಿದ್ದರು. 
ಆಸ್ಪತ್ರೆಗೆ ತೆರಳಿದ್ದ ಸಿಸಿಬಿ ಪೊಲೀಸರು ವಿದ್ವತ್ ಸಹೋದರ ಸಾತ್ವಿಕ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು. ಜೊತೆಗೆ ವಿದ್ವತ್ ಅವರ ಹೇಳಿಕೆಯನ್ನು ಪೊಲೀಸರು ಪಡೆದುಕೊಂಡಿದ್ದಾರೆ.
ನನ್ನ ತಮ್ಮನ ಮೇಲೆ ಮಾತ್ರವಲ್ಲ ನನ್ನ ಮೇಲೂ ನಲಪಾಡ್ ಮತ್ತು ಆತನ ಗ್ಯಾಂಗ್ ಹಲ್ಲೆ ಮಾಡಿತ್ತು. ಹಲ್ಲೆ ವಿಚಾರ ತಿಳಿದ ನಾನು ನೇರವಾಗಿ ವಿದ್ವತ್ ಚಿಕಿತ್ಸೆಗೆ ದಾಖಲಾಗಿದ್ದ ಮಲ್ಯ ಆಸ್ಪತ್ರೆಗೆ ತೆರಳಿದ್ದೆ.  ವಿದ್ವತ್ ನೋಡಲು ಆಸ್ಪತ್ರೆಗೆ ಬಂದಾಗ ಅಲ್ಲಿಗೂ ಆಗಮಿಸಿದ್ದ ನಲಪಾಡ್ ಗ್ಯಾಂಗ್ ನನ್ನ ಮೇಲೂ ಹಲ್ಲೆ ಮಾಡಿದರು ಎಂದು ಸಿಸಿಬಿ ಪೊಲೀಸರ ಮುಂದೆ ಆಸ್ಪತ್ರೆಯಲ್ಲಿ ನಡೆದ ಘಟನೆ ಬಗ್ಗೆ ಸಾತ್ವಿಕ್ ಮಾಹಿತಿ ನೀಡಿದ್ದಾರೆ ಹೀಗಾಗಿ ಸಾತ್ವಿಕ್ ಅವರನ್ನು ಪ್ರತ್ಯಕ್ಷ ಸಾಕ್ಷಿ ಎಂದು ಪರಿಗಣಿಸಬಹುದು ಎನ್ನಲಾಗಿದೆ.
ಇನ್ನೂ ಅದೀನ ನ್ಯಾಯಾಲಯದಲ್ಲಿ  ಮೊಹಮದ್ ಗೆ ಜಾಮೀನು ಸಿಗದ ಕಾರಣ ಇಂದು ಹೈಕೋರ್ಟ್ ಗೆ ಮೊರೆ ಹೋಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT