ಮಾರ್ಕೋಪೋಲೋ ಬಸ್ 
ರಾಜ್ಯ

ಬೆಂಗಳೂರು: ಮಾರ್ಕೋ ಪೋಲೋ ಬಸ್ ಖರೀದಿ ತನಿಖೆ ಸಿಐಡಿ ತನಿಖೆಗೆ

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ 98 ಮಾರ್ಕೊಪೊಲೋ ಬಸ್‌ಗಳ ಖರೀದಿಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ...

ಬೆಂಗಳೂರು:  ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ 98 ಮಾರ್ಕೊಪೊಲೋ ಬಸ್‌ಗಳ ಖರೀದಿಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ತನಿಖೆಗಾಗಿ ಸದ್ಯವೇ ಗೃಹ ಇಲಾಖೆ ಅಧಿಸೂಚನೆ ಹೊರಡಿಸಲಿದೆ’ ಎಂದು ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ಹೇಳಿದ್ದಾರೆ.
ಈ ಬಗ್ಗೆ ಸದನ ಸಮಿತಿ ತನಿಖೆ ನಡೆಸಿತ್ತು. ತಾಂತ್ರಿಕವಾಗಿ ಸೂಕ್ತವಲ್ಲದ ಬಸ್ ಖರೀದಿಸಲಾಗಿದೆ ಎಂದು ಸಮಿತಿ ವರದಿ ನೀಡಿತ್ತು. ಇದನ್ನು ಆಧರಿಸಿ ಸಿಐಡಿ ತನಿಖೆ ನಡೆಸಲು ಶಿಫಾರಸು ಮಾಡಲಾಗಿದೆ ಎಂದು ಅವರು ಹೇಳಿದರು.
2008 ರಲ್ಲಿ ಸಾರಿಗೆ ಸಚಿವ ಆರ್‌. ಅಶೋಕ್‌ ರಾಜ್ಯೋತ್ಸವ ಕೊಡುಗೆ ಎಂದು ಮಾರ್ಕೊಪೊಲೋ ಬಸ್‌ಗಳನ್ನು ಬೆಂಗಳೂರಿಗೆ ಪರಿಚಯಿಸಿದ್ದರು. ‘ಹವಾ ನಿಯಂತ್ರಿತ ಟಾಟಾ ಮಾರ್ಕೊಪೊಲೋ ಬಸ್‌ಗಳನ್ನು ವೊಲ್ವೊ ಬಸ್‌ ದರದ ಮೂರನೇ ಒಂದರಷ್ಟು ಅಂದರೆ ಪ್ರತಿ ಬಸ್‌ಗೆ  30.49 ಲಕ್ಷ ಕೊಟ್ಟು ಖರೀದಿಸುತ್ತಿದ್ದೇವೆ’ ಎಂದು ಆ ಸಂದರ್ಭದಲ್ಲಿ ಅಶೋಕ್‌ ತಿಳಿಸಿದ್ದರು.
ಜೆನರ್ಮ್‌(ಜವಾಹರಲಾಲ್‌ ನೆಹರೂ ನ್ಯಾಷನಲ್‌ ಅರ್ಬನ್‌ ರಿನೀವಲ್‌ ಮಿಷನ್‌) ಯೋಜನೆಯಡಿ ಬಿಎಂಟಿಸಿಗೆ ಬಸ್ಸುಗಳ ಖರೀದಿಗೆ ಕೇಂದ್ರ ಸರ್ಕಾರ  16 ಕೋಟಿ ಅನುದಾನ ನೀಡಿತ್ತು. ರಾಜ್ಯ ಸರ್ಕಾರ ರು. 14 ಕೋಟಿ ನೀಡಿತ್ತು.
ಈ ಬಸ್ಸುಗಳ ನಿರ್ವಹಣೆ ಬಗ್ಗೆ ಪ್ರಯಾಣಿಕರು ಮತ್ತು ಚಾಲಕರಿಂದ ಸಾಕಷ್ಟು ದೂರುಗಳು ಬಂದವು.  ಅವುಗಳೆಂದರೆ, ಕರ್ಕಶ ಸದ್ದು, ಕಡಿಮೆ ವೇಗ, ಕಳಪೆ ಗುಣಮಟ್ಟದ ಹವಾನಿಯಂತ್ರಿತ ವ್ಯವಸ್ಥೆ, ಪ್ರತಿ ಕಿ.ಮೀಗೆ 1.4 ಲೀಟರ್‌ ಇಂಧನ ಬಳಕೆ ಮತ್ತು ಅಧಿಕ ಪ್ರಮಾಣದ ಮಾಲಿನ್ಯ.ವೇಗ ಹೆಚ್ಚಿಸಲು ಬಸ್‌ಗಳಿಂದ ಹವಾನಿಯಂತ್ರಣ ವ್ಯವಸ್ಥೆಯನ್ನು ತೆಗೆದು ಹಾಕಲಾಯಿತು.
ಕಳಪೆ ಬಸ್ಸುಗಳನ್ನು ಐದು ವರ್ಷ ಓಡಿಸಿದ್ದರಿಂದ ಸಾರಿಗೆ ಸಂಸ್ಥೆಗೆ ರು. 70 ಕೋಟಿ ನಷ್ಟವಾಗಿದೆ. ಪ್ರತಿ ಬಸ್ಸಿಗೆ ಕಿ.ಮೀಗೆ ರು. 27 ರಷ್ಟು ನಷ್ಟ ಉಂಟಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT