ಮಾರ್ಕೋಪೋಲೋ ಬಸ್ 
ರಾಜ್ಯ

ಬೆಂಗಳೂರು: ಮಾರ್ಕೋ ಪೋಲೋ ಬಸ್ ಖರೀದಿ ತನಿಖೆ ಸಿಐಡಿ ತನಿಖೆಗೆ

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ 98 ಮಾರ್ಕೊಪೊಲೋ ಬಸ್‌ಗಳ ಖರೀದಿಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ...

ಬೆಂಗಳೂರು:  ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ 98 ಮಾರ್ಕೊಪೊಲೋ ಬಸ್‌ಗಳ ಖರೀದಿಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ತನಿಖೆಗಾಗಿ ಸದ್ಯವೇ ಗೃಹ ಇಲಾಖೆ ಅಧಿಸೂಚನೆ ಹೊರಡಿಸಲಿದೆ’ ಎಂದು ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ಹೇಳಿದ್ದಾರೆ.
ಈ ಬಗ್ಗೆ ಸದನ ಸಮಿತಿ ತನಿಖೆ ನಡೆಸಿತ್ತು. ತಾಂತ್ರಿಕವಾಗಿ ಸೂಕ್ತವಲ್ಲದ ಬಸ್ ಖರೀದಿಸಲಾಗಿದೆ ಎಂದು ಸಮಿತಿ ವರದಿ ನೀಡಿತ್ತು. ಇದನ್ನು ಆಧರಿಸಿ ಸಿಐಡಿ ತನಿಖೆ ನಡೆಸಲು ಶಿಫಾರಸು ಮಾಡಲಾಗಿದೆ ಎಂದು ಅವರು ಹೇಳಿದರು.
2008 ರಲ್ಲಿ ಸಾರಿಗೆ ಸಚಿವ ಆರ್‌. ಅಶೋಕ್‌ ರಾಜ್ಯೋತ್ಸವ ಕೊಡುಗೆ ಎಂದು ಮಾರ್ಕೊಪೊಲೋ ಬಸ್‌ಗಳನ್ನು ಬೆಂಗಳೂರಿಗೆ ಪರಿಚಯಿಸಿದ್ದರು. ‘ಹವಾ ನಿಯಂತ್ರಿತ ಟಾಟಾ ಮಾರ್ಕೊಪೊಲೋ ಬಸ್‌ಗಳನ್ನು ವೊಲ್ವೊ ಬಸ್‌ ದರದ ಮೂರನೇ ಒಂದರಷ್ಟು ಅಂದರೆ ಪ್ರತಿ ಬಸ್‌ಗೆ  30.49 ಲಕ್ಷ ಕೊಟ್ಟು ಖರೀದಿಸುತ್ತಿದ್ದೇವೆ’ ಎಂದು ಆ ಸಂದರ್ಭದಲ್ಲಿ ಅಶೋಕ್‌ ತಿಳಿಸಿದ್ದರು.
ಜೆನರ್ಮ್‌(ಜವಾಹರಲಾಲ್‌ ನೆಹರೂ ನ್ಯಾಷನಲ್‌ ಅರ್ಬನ್‌ ರಿನೀವಲ್‌ ಮಿಷನ್‌) ಯೋಜನೆಯಡಿ ಬಿಎಂಟಿಸಿಗೆ ಬಸ್ಸುಗಳ ಖರೀದಿಗೆ ಕೇಂದ್ರ ಸರ್ಕಾರ  16 ಕೋಟಿ ಅನುದಾನ ನೀಡಿತ್ತು. ರಾಜ್ಯ ಸರ್ಕಾರ ರು. 14 ಕೋಟಿ ನೀಡಿತ್ತು.
ಈ ಬಸ್ಸುಗಳ ನಿರ್ವಹಣೆ ಬಗ್ಗೆ ಪ್ರಯಾಣಿಕರು ಮತ್ತು ಚಾಲಕರಿಂದ ಸಾಕಷ್ಟು ದೂರುಗಳು ಬಂದವು.  ಅವುಗಳೆಂದರೆ, ಕರ್ಕಶ ಸದ್ದು, ಕಡಿಮೆ ವೇಗ, ಕಳಪೆ ಗುಣಮಟ್ಟದ ಹವಾನಿಯಂತ್ರಿತ ವ್ಯವಸ್ಥೆ, ಪ್ರತಿ ಕಿ.ಮೀಗೆ 1.4 ಲೀಟರ್‌ ಇಂಧನ ಬಳಕೆ ಮತ್ತು ಅಧಿಕ ಪ್ರಮಾಣದ ಮಾಲಿನ್ಯ.ವೇಗ ಹೆಚ್ಚಿಸಲು ಬಸ್‌ಗಳಿಂದ ಹವಾನಿಯಂತ್ರಣ ವ್ಯವಸ್ಥೆಯನ್ನು ತೆಗೆದು ಹಾಕಲಾಯಿತು.
ಕಳಪೆ ಬಸ್ಸುಗಳನ್ನು ಐದು ವರ್ಷ ಓಡಿಸಿದ್ದರಿಂದ ಸಾರಿಗೆ ಸಂಸ್ಥೆಗೆ ರು. 70 ಕೋಟಿ ನಷ್ಟವಾಗಿದೆ. ಪ್ರತಿ ಬಸ್ಸಿಗೆ ಕಿ.ಮೀಗೆ ರು. 27 ರಷ್ಟು ನಷ್ಟ ಉಂಟಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT