ಮಾರ್ಕೋಪೋಲೋ ಬಸ್ 
ರಾಜ್ಯ

ಬೆಂಗಳೂರು: ಮಾರ್ಕೋ ಪೋಲೋ ಬಸ್ ಖರೀದಿ ತನಿಖೆ ಸಿಐಡಿ ತನಿಖೆಗೆ

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ 98 ಮಾರ್ಕೊಪೊಲೋ ಬಸ್‌ಗಳ ಖರೀದಿಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ...

ಬೆಂಗಳೂರು:  ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ 98 ಮಾರ್ಕೊಪೊಲೋ ಬಸ್‌ಗಳ ಖರೀದಿಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ತನಿಖೆಗಾಗಿ ಸದ್ಯವೇ ಗೃಹ ಇಲಾಖೆ ಅಧಿಸೂಚನೆ ಹೊರಡಿಸಲಿದೆ’ ಎಂದು ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ಹೇಳಿದ್ದಾರೆ.
ಈ ಬಗ್ಗೆ ಸದನ ಸಮಿತಿ ತನಿಖೆ ನಡೆಸಿತ್ತು. ತಾಂತ್ರಿಕವಾಗಿ ಸೂಕ್ತವಲ್ಲದ ಬಸ್ ಖರೀದಿಸಲಾಗಿದೆ ಎಂದು ಸಮಿತಿ ವರದಿ ನೀಡಿತ್ತು. ಇದನ್ನು ಆಧರಿಸಿ ಸಿಐಡಿ ತನಿಖೆ ನಡೆಸಲು ಶಿಫಾರಸು ಮಾಡಲಾಗಿದೆ ಎಂದು ಅವರು ಹೇಳಿದರು.
2008 ರಲ್ಲಿ ಸಾರಿಗೆ ಸಚಿವ ಆರ್‌. ಅಶೋಕ್‌ ರಾಜ್ಯೋತ್ಸವ ಕೊಡುಗೆ ಎಂದು ಮಾರ್ಕೊಪೊಲೋ ಬಸ್‌ಗಳನ್ನು ಬೆಂಗಳೂರಿಗೆ ಪರಿಚಯಿಸಿದ್ದರು. ‘ಹವಾ ನಿಯಂತ್ರಿತ ಟಾಟಾ ಮಾರ್ಕೊಪೊಲೋ ಬಸ್‌ಗಳನ್ನು ವೊಲ್ವೊ ಬಸ್‌ ದರದ ಮೂರನೇ ಒಂದರಷ್ಟು ಅಂದರೆ ಪ್ರತಿ ಬಸ್‌ಗೆ  30.49 ಲಕ್ಷ ಕೊಟ್ಟು ಖರೀದಿಸುತ್ತಿದ್ದೇವೆ’ ಎಂದು ಆ ಸಂದರ್ಭದಲ್ಲಿ ಅಶೋಕ್‌ ತಿಳಿಸಿದ್ದರು.
ಜೆನರ್ಮ್‌(ಜವಾಹರಲಾಲ್‌ ನೆಹರೂ ನ್ಯಾಷನಲ್‌ ಅರ್ಬನ್‌ ರಿನೀವಲ್‌ ಮಿಷನ್‌) ಯೋಜನೆಯಡಿ ಬಿಎಂಟಿಸಿಗೆ ಬಸ್ಸುಗಳ ಖರೀದಿಗೆ ಕೇಂದ್ರ ಸರ್ಕಾರ  16 ಕೋಟಿ ಅನುದಾನ ನೀಡಿತ್ತು. ರಾಜ್ಯ ಸರ್ಕಾರ ರು. 14 ಕೋಟಿ ನೀಡಿತ್ತು.
ಈ ಬಸ್ಸುಗಳ ನಿರ್ವಹಣೆ ಬಗ್ಗೆ ಪ್ರಯಾಣಿಕರು ಮತ್ತು ಚಾಲಕರಿಂದ ಸಾಕಷ್ಟು ದೂರುಗಳು ಬಂದವು.  ಅವುಗಳೆಂದರೆ, ಕರ್ಕಶ ಸದ್ದು, ಕಡಿಮೆ ವೇಗ, ಕಳಪೆ ಗುಣಮಟ್ಟದ ಹವಾನಿಯಂತ್ರಿತ ವ್ಯವಸ್ಥೆ, ಪ್ರತಿ ಕಿ.ಮೀಗೆ 1.4 ಲೀಟರ್‌ ಇಂಧನ ಬಳಕೆ ಮತ್ತು ಅಧಿಕ ಪ್ರಮಾಣದ ಮಾಲಿನ್ಯ.ವೇಗ ಹೆಚ್ಚಿಸಲು ಬಸ್‌ಗಳಿಂದ ಹವಾನಿಯಂತ್ರಣ ವ್ಯವಸ್ಥೆಯನ್ನು ತೆಗೆದು ಹಾಕಲಾಯಿತು.
ಕಳಪೆ ಬಸ್ಸುಗಳನ್ನು ಐದು ವರ್ಷ ಓಡಿಸಿದ್ದರಿಂದ ಸಾರಿಗೆ ಸಂಸ್ಥೆಗೆ ರು. 70 ಕೋಟಿ ನಷ್ಟವಾಗಿದೆ. ಪ್ರತಿ ಬಸ್ಸಿಗೆ ಕಿ.ಮೀಗೆ ರು. 27 ರಷ್ಟು ನಷ್ಟ ಉಂಟಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT