ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಐದನೇ ಅಂತಸ್ತಿನಿಂದ ಜಿಗಿದು ತಾಯಿ, ಮಗ ಆತ್ಮಹತ್ಯೆ; ಕೋಲಾರ ಇನ್ಸ್ ಪೆಕ್ಟರ್ ಕೈವಾಡದ ಶಂಕೆ

ನಗರದ ಕಾಡುಗೋಡಿಯಲ್ಲಿ ಐದನೇ ಅಂತಸ್ತಿನಿಂದ ಜಿಗಿದು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವರದಿಯಾಗಿದೆ...

ಬೆಂಗಳೂರು: ನಗರದ ಕಾಡುಗೋಡಿಯಲ್ಲಿ ಐದನೇ ಅಂತಸ್ತಿನಿಂದ ಜಿಗಿದು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿದ್ದು ಕೋಲಾರದ ಇನ್ಸ್ ಪೆಕ್ಟರ್ ಚಂದ್ರಪ್ಪ ಅವರ ಕೈವಾಡ ಇರುವುದಾಗಿ ಶಂಕಿಸಲಾಗಿದ್ದು ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನಗಳು ಮೂಡ ತೊಡಗಿವೆ. 
ಕಾಡುಗೋಡಿಯ ಬೆಳ್ತೂರಿನಲ್ಲಿ ಬೆಳಗಿವ ಜಾವ ಈ ಘಟನೆ ನಡೆದಿದ್ದು ಯಾದಗಿರಿ ಮೂಲದ 55 ವರ್ಷದ ಸುಂದರಮ್ಮ ಹಾಗೂ 36 ವರ್ಷದ ಮೌನೇಶ್ ಮೃತ ದುರ್ದೈವಿಗಳು. ಈ ಇಬ್ಬರೂ ಕೂಡ ನಾಲ್ಕು ದಿನಗಳ ಹಿಂದಷ್ಟೇ ಈ ಅಪಾರ್ಟ್ ಮೆಂಟ್ ಗೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 
ಮೌನೇಶ್ ಚಂದ್ರಪ್ಪ ಅವರ ಸಹೋದರಿಯನ್ನು ಪ್ರೀತಿಸುತ್ತಿದ್ದು ಆ ಯುವತಿ ಕೂಡಾ ಅದೇ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದಳು. ಇವರಿಬ್ಬರು ಎರಡು ಮೂರು ಬಾರಿ ಮನೆ ಬಿಟ್ಟು ಹೋಗಿದ್ದರು. ಕಳೆದ ಕೆಲ ದಿನಗಳಿಂದ ಯುವತಿ ಕಾಣೆಯಾಗಿದ್ದು ಈ ಬಗ್ಗೆ ಯುವತಿ ಸಹೋದರ ಚಂದ್ರಪ್ಪ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ತಂಗಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದರು. 
ತನ್ನ ತಂಗಿ ಮನೆ ಬಿಟ್ಟು ಹೋಗಿದ್ದರಿಂದ ಕೋಪಗೊಂಡಿದ್ದ ಯುವತಿಯ ಸಹೋದರ ಚಂದ್ರಪ್ಪ  ಮೌನೇಶ್ ಹಾಗೂ ಸುನಂದಮ್ಮ ಅವರನ್ನು ತಂದು ತಾನು ವಾಸವಿದ್ದ ಬೆಳತೂರಿನ ಅಪಾರ್ಟ್ ಮೆಂಟ್ ಪ್ಲಾಟ್ ನಲ್ಲಿ ಕೂಡಿಹಾಕಿದ್ದ ಎನ್ನಲಾಗಿದೆ. 
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT