ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಐದನೇ ಅಂತಸ್ತಿನಿಂದ ಜಿಗಿದು ತಾಯಿ, ಮಗ ಆತ್ಮಹತ್ಯೆ; ಕೋಲಾರ ಇನ್ಸ್ ಪೆಕ್ಟರ್ ಕೈವಾಡದ ಶಂಕೆ

ನಗರದ ಕಾಡುಗೋಡಿಯಲ್ಲಿ ಐದನೇ ಅಂತಸ್ತಿನಿಂದ ಜಿಗಿದು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವರದಿಯಾಗಿದೆ...

ಬೆಂಗಳೂರು: ನಗರದ ಕಾಡುಗೋಡಿಯಲ್ಲಿ ಐದನೇ ಅಂತಸ್ತಿನಿಂದ ಜಿಗಿದು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿದ್ದು ಕೋಲಾರದ ಇನ್ಸ್ ಪೆಕ್ಟರ್ ಚಂದ್ರಪ್ಪ ಅವರ ಕೈವಾಡ ಇರುವುದಾಗಿ ಶಂಕಿಸಲಾಗಿದ್ದು ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನಗಳು ಮೂಡ ತೊಡಗಿವೆ. 
ಕಾಡುಗೋಡಿಯ ಬೆಳ್ತೂರಿನಲ್ಲಿ ಬೆಳಗಿವ ಜಾವ ಈ ಘಟನೆ ನಡೆದಿದ್ದು ಯಾದಗಿರಿ ಮೂಲದ 55 ವರ್ಷದ ಸುಂದರಮ್ಮ ಹಾಗೂ 36 ವರ್ಷದ ಮೌನೇಶ್ ಮೃತ ದುರ್ದೈವಿಗಳು. ಈ ಇಬ್ಬರೂ ಕೂಡ ನಾಲ್ಕು ದಿನಗಳ ಹಿಂದಷ್ಟೇ ಈ ಅಪಾರ್ಟ್ ಮೆಂಟ್ ಗೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 
ಮೌನೇಶ್ ಚಂದ್ರಪ್ಪ ಅವರ ಸಹೋದರಿಯನ್ನು ಪ್ರೀತಿಸುತ್ತಿದ್ದು ಆ ಯುವತಿ ಕೂಡಾ ಅದೇ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದಳು. ಇವರಿಬ್ಬರು ಎರಡು ಮೂರು ಬಾರಿ ಮನೆ ಬಿಟ್ಟು ಹೋಗಿದ್ದರು. ಕಳೆದ ಕೆಲ ದಿನಗಳಿಂದ ಯುವತಿ ಕಾಣೆಯಾಗಿದ್ದು ಈ ಬಗ್ಗೆ ಯುವತಿ ಸಹೋದರ ಚಂದ್ರಪ್ಪ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ತಂಗಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದರು. 
ತನ್ನ ತಂಗಿ ಮನೆ ಬಿಟ್ಟು ಹೋಗಿದ್ದರಿಂದ ಕೋಪಗೊಂಡಿದ್ದ ಯುವತಿಯ ಸಹೋದರ ಚಂದ್ರಪ್ಪ  ಮೌನೇಶ್ ಹಾಗೂ ಸುನಂದಮ್ಮ ಅವರನ್ನು ತಂದು ತಾನು ವಾಸವಿದ್ದ ಬೆಳತೂರಿನ ಅಪಾರ್ಟ್ ಮೆಂಟ್ ಪ್ಲಾಟ್ ನಲ್ಲಿ ಕೂಡಿಹಾಕಿದ್ದ ಎನ್ನಲಾಗಿದೆ. 
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2nd PUC exam 2026-ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ-1: 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ, ಸಾವಿರಕ್ಕೂ ಅಧಿಕ ಮಕ್ಕಳಿಗೆ ನಿರಾಕರಣೆ

Bolivia ರಾಜಧಾನಿ ಸಮೀಪ ಕಾರ್ಗೊ ವಿಮಾನ ಪತನ: ಕನಿಷ್ಠ 15 ಮಂದಿ ಸಾವು-Video

ಅಹಿಂದ ಉತ್ತರಾಧಿಕಾರಕ್ಕೆ ಜಾರಕಿಹೊಳಿ ಸಿದ್ದತೆ: ಹಿಂದುಳಿದ ವರ್ಗಗಳ ಚ್ಯಾಂಪಿಯನ್ ಪಟ್ಟಕ್ಕೆ 'ಸಾಹುಕಾರ್' ಸಮರ್ಥರೇ?

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಯಾವ ಶಕ್ತಿ ಪ್ರದರ್ಶನವೂ ಇಲ್ಲ; ಡಿ.ಕೆ. ಶಿವಕುಮಾರ್

ಇಂದು ದೆಹಲಿಯಲ್ಲಿ ಚುನಾವಣೆ ನಡೆಸಿ... BJP 10 ಸ್ಥಾನ ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ: ಕೇಜ್ರಿವಾಲ್ ಸವಾಲು

SCROLL FOR NEXT