ಸಾಂದರ್ಭಿಕ ಚಿತ್ರ 
ರಾಜ್ಯ

ಚುನಾವಣಾ ಗುರುತು ಪತ್ರದ ಸಂಖ್ಯೆ ನೀಡುವಂತೆ ಸರ್ಕಾರಿ ನೌಕರರಿಗೆ ಆದೇಶ

ನೌಕರರ ಚುನಾವಣಾ ಗುರುತು ಪತ್ರದ ದಾಖಲೆಗಳನ್ನು ನೀಡುವಂತೆ ಎಲ್ಲಾ ಸರ್ಕಾರಿ ನೌಕರರಿಗೆ ...

ಬೆಂಗಳೂರು: ನೌಕರರ ಚುನಾವಣಾ ಗುರುತು ಪತ್ರದ ಸಂಖ್ಯೆಯನ್ನು ಸರ್ಕಾರದ ದಾಖಲೆಗಳಿಗೆ ಸಂಪರ್ಕಿಸುವಂತೆ ಎಲ್ಲಾ ಸರ್ಕಾರಿ ನೌಕರರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಡಿಪಿಎಆರ್) ಆದೇಶ ನೀಡಿ ಸುತ್ತೋಲೆ ಹೊರಡಿಸಿದೆ.

ಮೂರು ದಿನಗಳೊಳಗೆ ಮಾನವ ಸಂಪನ್ಮೂಲ ನಿರ್ವಹಣೆ ವ್ಯವಸ್ಥೆಗೆ ಗುರುತು ಪತ್ರದ ದಾಖಲೆಗಳನ್ನು ನೀಡಬೇಕೆಂದು ಮತ್ತು ಒಂದು ವೇಳೆ ವಿಫಲವಾದರೆ ನೌಕರರ ಮಾರ್ಚ್ ತಿಂಗಳ ವೇತನವನ್ನು  ಬಿಡುಗಡೆಮಾಡದೆ ಹಿಡಿದಿಟ್ಟುಕೊಳ್ಳಲಾಗುವುದು ಎಂದು ನೌಕರರಿಗೆ ಎಚ್ಚರಿಕೆ ನೀಡಲಾಗಿದೆ.

ಈ ವರ್ಷ ರಾಜ್ಯ ಚುನಾವಣಾ ಆಯೋಗ ಚುನಾವಣಾ ಕರ್ತವ್ಯಕ್ಕೆ 3.25 ಲಕ್ಷ ನೌಕರರ ಅಗತ್ಯವನ್ನು ಹೊಂದಿದೆ. ಡಿಪಿಎಆರ್ ಅಧೀನ ಕಾರ್ಯದರ್ಶಿ ಎಸ್.ವಿ.ಶಂಕರ್ ಎಲ್ಲಾ ಉಪ ಕಾರ್ಯದರ್ಶಿಗಳಿಗೆ ಮತ್ತು ಸಹ-ನಿರ್ದೇಶಕರುಗಳಿಗೆ ಆದೇಶ ನೀಡಿ ಸುತ್ತೋಲೆ ಹೊರಡಿಸಿದ್ದಾರೆ.

ತಮ್ಮ ವೇತನ ದಾಖಲೆಗಳಿಗೆ ಚುನಾವಣಾ ಗುರುತು ಪತ್ರವನ್ನು ಜೋಡಿಸುವಂತೆ ಎಲ್ಲಾ ಸರ್ಕಾರಿ ಇಲಾಖೆಗಳಿಗೆ ಆದೇಶ ನೀಡಲಾಗಿದೆ. ಮುಖ್ಯ ಚುನಾವಣಾಧಿಕಾರಿ ಸೂಚನೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶಂಕರ್ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT