ಸಾಂದರ್ಭಿಕ ಚಿತ್ರ 
ರಾಜ್ಯ

ಏರ್ ಆಂಬ್ಯುಲೆನ್ಸ್ ಸೇವೆಗೆ 8 ಹೆಲಿಪ್ಯಾಡ್ ಗಳ ನಿರ್ಮಾಣಕ್ಕೆ ಬಿಬಿಎಂಪಿ ಸಿದ್ಧತೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 8 ವಲಯಗಳಲ್ಲಿ ಮುಂಬರುವ ಜುಲೈಯಿಂದ ಹೆಲಿಟ್ಯಾಕ್ಸಿ ...

ಬೆಂಗಳೂರು; ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 8 ವಲಯಗಳಲ್ಲಿ ಮುಂಬರುವ ಜುಲೈಯಿಂದ ಹೆಲಿಟ್ಯಾಕ್ಸಿ ಸೇವೆಯನ್ನು ಆರಂಭಿಸುವ ಸಾಧ್ಯತೆಯಿದೆ. ಗಂಭೀರವಾಗಿ ಅನಾರೋಗ್ಯಕ್ಕೀಡಾಗಿರುವ ಅಥವಾ ಗಂಭೀರ ಸ್ವರೂಪದ ಗಾಯ ಅಥವಾ ಅಪಘಾತಕ್ಕೀಡಾಗಿ ತುರ್ತು ಚಿಕಿತ್ಸೆಯ ಅಗತ್ಯವಿರುವ ರೋಗಿಗಳಿಗೆ ತುರ್ತು ಆಂಬ್ಯುಲೆನ್ಸ್ ಸೇವೆ ಒದಗಿಸಲು ಈ ಸೌಲಭ್ಯ ನೆರವಾಗಲಿದೆ.

ಬೆಂಗಳೂರು ನಗರದ ಸಂಚಾರ ದಟ್ಟಣೆಯಲ್ಲಿ ಸಮಯ ಉಳಿತಾಯ ಮಾಡಿ ಉತ್ತಮ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲು ನೆರವಾಗಲು ಏರ್ ಆಂಬ್ಯುಲೆನ್ಸ್ ಮೂಲಕ ರೋಗಿಗಳನ್ನು ಕರೆದೊಯ್ಯಲು ಹೆಲಿಪಾಡ್ ಗಳನ್ನು ಆರಂಭಿಸುವ ಯೋಜನೆಯನ್ನು ಮಹಾನಗರ ಪಾಲಿಕೆ ಹಾಕಿಕೊಂಡಿದೆ.

ಬಿಬಿಎಂಪಿಯ ಪ್ರತಿ ವಲಯಗಳಲ್ಲಿ ಏರ್ ಆಂಬ್ಯುಲೆನ್ಸ್ ಗಳಿಗೆ ಹೆಲಿಪ್ಯಾಡ್ ಗಳ ನಿರ್ಮಾಣ ಕಾರ್ಯ ಇನ್ನು 4 ತಿಂಗಳಲ್ಲಿ ಮುಗಿಯಲಿದೆ ಎನ್ನುತ್ತಾರೆ ಮೇಯರ್ ಸಂಪತ್ ರಾಜ್.
ಕಳೆದ ಫೆಬ್ರವರಿ 28ರಂದು ಮಂಡಿಸಿರುವ ಬಿಬಿಎಂಪಿ ಬಜೆಟ್ ನಲ್ಲಿ ಹೆಲಿಪ್ಯಾಡ್ ಗಳನ್ನು ನಿರ್ಮಿಸುವ ಕುರಿತು ಬಿಬಿಎಂಪಿ ಘೋಷಣೆ ಮಾಡಿತ್ತು. ವರದಿ ಪ್ರಕಾರ ಪ್ರಸ್ತುತ ಬೆಂಗಳೂರಿನಲ್ಲಿ 50 ಹೆಲಿಪ್ಯಾಡ್ ಗಳಿವೆ. ಆದರೆ ಅವುಗಳಲ್ಲಿ ಬಹುತೇಕ ಖಾಸಗಿ ಜಮೀನುಗಳಲ್ಲಿದ್ದು ಸಾರ್ವಜನಿಕರಿಗೆ ಲಭ್ಯವಾಗುವುದಿಲ್ಲ. ಇದೇ ಮೊದಲ ಬಾರಿಗೆ ಮಹಾನಗರ ಪಾಲಿಕೆಯೊಂದು ತನ್ನದೇ ಸ್ವಂತ ಹೆಲಿಪ್ಯಾಡ್ ಗಳ ನಿರ್ಮಾಣಕ್ಕೆ ಮುಂದಾಗಿದೆ.

ಪ್ರತಿ ವಲಯಗಳಲ್ಲಿ ಬಿಬಿಎಂಪಿ ಜಮೀನುಗಳನ್ನು ಗುರುತಿಸಿದ್ದು, ಯೋಜನೆ ಪ್ರಾರಂಭಕ್ಕೆ ಸದ್ಯದಲ್ಲಿಯೇ ಟೆಂಡರ್ ಕರೆಯಲಿದೆ. ಈ ಸೇವೆಯನ್ನು ಬಳಸಿಕೊಳ್ಳುವ ಗ್ರಾಹಕರಿಗೆ ಅಂದಾಜು ದರವಿರುತ್ತದೆ. ಈ ಹಣ ಹೆಲಿಪ್ಯಾಡ್ ಗಳನ್ನು ನಿರ್ಮಿಸಿದ ಮತ್ತು ಏರ್ ಆಂಬ್ಯುಲೆನ್ಸ್ ಸೇವೆ ಒದಗಿಸುವ ಖಾಸಗಿ ಸಂಸ್ಥೆಗೆ ಹೋಗಲಿದೆ.

ಭೂಮಿ ಒದಗಿಸುವುದು ಮತ್ತು ಹೆಲಿಪ್ಯಾಡ್ ಗಳ ಕಂಪೌಂಡ್ ನಿರ್ಮಾಣ ಬಿಟ್ಟರೆ ಮಹಾನಗರ ಪಾಲಿಕೆ ಬೇರೇನು ಖರ್ಚು ಮಾಡುವುದಿಲ್ಲ. ಆರ್ಥಿಕವಾಗಿ ಹಿಂದುಳಿದವರಿಗೆ ಈ ಸೌಲಭ್ಯ ಒದಗಿಸಲು ಸಬ್ಸಿಡಿ ದರದಲ್ಲಿ ಸೇವೆ ನೀಡಲು ವಿಮಾ ಕಂಪೆನಿಗಳ ಜೊತೆ ಒಪ್ಪಂದ ಮಾಡಿಕೊಳ್ಳಲು ಬಿಬಿಎಂಪಿ ಮುಂದಾಗಿದೆ.

ಲಂಡನ್ ನ ಚಾರಿಟೇಬಲ್ ಏರ್ ಆಂಬ್ಯುಲೆನ್ಸ್:
ಲಂಡನ್ ನಲ್ಲಿ ದಾಖಲಾತಿ ಹೊಂದಿದ ಚಾರಿಟೆಬಲ್ ಟ್ರಸ್ಟ್ ಇದ್ದು ಅದು 1989ರಿಂದ ಸೇವೆಯಲ್ಲಿ ನಿರತವಾಗಿದೆ. ಹೆಲಿಕಾಪ್ಟರ್ ತುರ್ತು ವೈದ್ಯಕೀಯ ಸೇವೆ ಹಗಲು ಹೊತ್ತಿನಲ್ಲಿ ಏರ್ ಆಂಬ್ಯುಲೆನ್ಸ್ ನ್ನು ಮತ್ತು ರಾತ್ರಿ ವೇಳೆ ತುರ್ತು ಕ್ರಿಯಾ ವಾಹನವನ್ನು ಒದಗಿಸುತ್ತಾ ಬಂದಿದೆ. ಏರ್ ಆಂಬ್ಯುಲೆನ್ಸ್ ಸೇವೆಯಿಂದ ರೋಗಿಗಳ ಮರಣ ಪ್ರಮಾಣವನ್ನು ಕಡಿಮೆ ಮಾಡಬಹುದು ಎನ್ನುತ್ತಾರೆ ವೈದ್ಯರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT