ನಾಡಧ್ವಜ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ಕರ್ನಾಟಕಕ್ಕೆ ಪ್ರತ್ಯೇಕ ನಾಡಧ್ವಜ, ಸಿಎಂ ಸಿದ್ದರಾಮಯ್ಯ ಅನಾವರಣ

ಪ್ರತ್ಯೇಕ ನಾಡಧ್ವಜ ಹೊಂದುವ ಕರ್ನಾಟಕ ಜನತೆಯ ಕನಸು ನನಸಾಗಿದ್ದು, ಗುರುವಾರ ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಕನ್ನಡನಾಡಿನ ನಾಡಧ್ವಜವನ್ನು ಅನಾವರಣಗೊಳಿಸಿದ್ದಾರೆ.

ಬೆಂಗಳೂರು: ಪ್ರತ್ಯೇಕ ನಾಡಧ್ವಜ ಹೊಂದುವ ಕರ್ನಾಟಕ ಜನತೆಯ ಕನಸು ನನಸಾಗಿದ್ದು, ಗುರುವಾರ ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಕನ್ನಡನಾಡಿನ ನಾಡಧ್ವಜವನ್ನು ಅನಾವರಣಗೊಳಿಸಿದ್ದಾರೆ.
ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಹಳದಿ, ಬಿಳಿ ಮತ್ತು ಕೆಂಪು ಬಣ್ಣದ ನಾಡಧ್ವಜವನ್ನು ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಅನಾವರಣಗೊಳಿಸಿದರು. 
ನಾಡಧ್ವದ ಸಮಿತಿಕೊಟ್ಟ ಶಿಫಾರಸ್ಸಿನಂತೆ ರಾಜ್ಯ ಸರ್ಕಾರ ನಾಡಧ್ವಜ ಸಿದ್ಧಪಡಿಸಿದ್ದು. ಇದೀಗ ನಾಡಧ್ವಜವನ್ನು ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದ್ದಾರೆ. ಇನ್ನು ನಾಡಧ್ವಜ ಅನಾವರಣ ಕಾರ್ಯಕ್ರಮದಲ್ಲಿ ಕನ್ನಡ ಪರ ಹೋರಾಟಗಾರು, ರಾಜ್ಯ ಸಚಿವರು ಸೇರಿದಂತೆ ಪ್ರಮುಖ ಸಾಹಿತಿಗಳು ಪಾಲ್ಗೊಂಡಿದ್ದರು.
ಸಾಹಿತಿ ಹಂಪನಾಗರಾಜಯ್ಯ ಅವರು ತ್ರಿವರ್ಣ ಬಣ್ಣದ ನಾಡಧ್ವಜವನ್ನು ವಿನ್ಯಾಸ ಮಾಡಿದ್ದು, ಇಂದು ರಾಜ್ಯ ಸಂಪುಟ ಸಭೆಗೆ ಹಸ್ತಾಂತರಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನಾಡಧ್ವಜಕ್ಕೆ ಅನುಮೋದನೆ ನೀಡಿದೆ. ಇದೀಗ ಸರ್ಕಾರ ಅನುಮೋದನೆ ನೀಡಿರುವ ನಾಡಧ್ವಜಕ್ಕೆ ಕೇಂದ್ರ ಸರ್ಕಾರದ ಅನುಮೋದನೆ ಬೇಕಿದ್ದು, ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದ್ದೇ ಆದರೆ ಪ್ರತ್ಯೇಕ ನಾಡಧ್ವಜ ಹೊಂದಿದ ಮೊದಲ ರಾಜ್ಯ ಎಂಬ ಕೀರ್ತಿಗೆ ಕರ್ನಾಟಕ ಭಾಜನವಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!