ಲೋಕಾಯುಕ್ತ ಕಚೇರಿ ಎದುರು ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮರಾ 
ರಾಜ್ಯ

ಲೋಕಾಯುಕ್ತ ಕಚೇರಿಯ ಲೋಹಪತ್ತೆ ಯಂತ್ರ ನಿಷ್ಕ್ರಿಯ: ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ

ಕರ್ನಾಟಕ ಲೋಕಾಯುಕ್ತ ಕಚೇರಿಯಲ್ಲಿ ಭದ್ರತೆಯ ಕೊರತೆಯಿದೆ ಎಂದು ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಜೆ ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ಪ್ರಮುಖ...

ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಕಚೇರಿಯಲ್ಲಿ ಭದ್ರತೆಯ ಕೊರತೆಯಿದೆ ಎಂದು ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಜೆ ಆರೋಪಿಸಿದ್ದಾರೆ.
ರಾಜ್ಯ ಸರ್ಕಾರದ ಪ್ರಮುಖ ಕಚೇರಿಗಳ ಭದ್ರತಾ ಉಪಕರಣಗಳನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ಕೂಡ ಅವರು ಹೇಳಿದ್ದಾರೆ.

ಬೆಂಗಳೂರಿನ ಮಲ್ಯ ಆಸ್ಪತ್ರೆಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಕಚೇರಿ ಮುಂದಿರುವ ಲೋಹಪತ್ತೆ ಯಂತ್ರ(ಮೆಟಲ್ ಡಿಟೆಕ್ಟರ್) ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ, ಬದಲಿ ಉಪಕರಣವನ್ನು ಅಶವಡಿಸುವಂತೆ ಅಥವಾ ದುರಸ್ತಿ ಮಾಡುವಂತೆ ಕಳೆದೆರಡು ವರ್ಷಗಳಲ್ಲಿ ಸರ್ಕಾರಕ್ಕೆ ಕನಿಷ್ಠವೆಂದರೂ 20 ಬಾರಿ ಪತ್ರ ಬರೆಯಲಾಗಿದೆ. ಅದಕ್ಕಿಂತಲೂ ಹೆಚ್ಚಾಗಿ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಯವರು ಸರ್ಕಾರದಿಂದ ತಮಗೆ ಹೆಚ್ಚು ಭದ್ರತೆ ಬೇಕೆಂದು ಕೋರಿದ್ದರು ಎಂಬ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ಲೋಕಾಯುಕ್ತ ಕಚೇರಿ ಮುಂದಿನ ಲೋಹಪತ್ತೆ ಯಂತ್ರ ಕೆಲಸ ಮಾಡುತ್ತಿದ್ದರೆ ವಿಶ್ವನಾಥ್ ಶೆಟ್ಟಿ ಅವರ ಮೇಲೆ ಹಲ್ಲೆ ನಡೆಸಿದ ಆರೋಪಿ ಕಚೇರಿ ಪ್ರವೇಶಿಸುತ್ತಿದ್ದಂತೆ ಆತನ ಕೈಯಲ್ಲಿದ್ದ ಆಯುಧವನ್ನು ಪತ್ತೆಹಚ್ಚಿ ದಾಳಿ ನಡೆಯುವುದನ್ನು ತಪ್ಪಿಸಬಹುದಾಗಿತ್ತು. ಇದು ಭದ್ರತೆಯ ಕೊರತೆಯಿಂದಾಗಿ ಘಟನೆ ನಡೆದಿದೆ. ಲೋಕಾಯುಕ್ತ ನ್ಯಾಯಮೂರ್ತಿಗಳ ಮೇಲೆ ದಾಳಿ ನಡೆಯಲು ಕಾರಣವಾದ ಎಲ್ಲಾ ಲೋಪದೋಷಗಳನ್ನು ರಾಜ್ಯ ಸರ್ಕಾರ ಪತ್ತೆಹಚ್ಚಬೇಕು ಎಂದು ಸಂತೋಷ್ ಹೆಗ್ಡೆ ಒತ್ತಾಯಿಸಿದ್ದಾರೆ.



ದಾಳಿ ನಂತರ ಲೋಕಾಯುಕ್ತ ಕಚೇರಿಗೆ ಆಗಮಿಸುತ್ತಿರುವ ವಿಧಿವಿಜ್ಞಾನ ತಂಡ

ಈ ಹಿಂದೆ, ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧ, ವಿಕಾಸ ಸೌಧ, ಲೋಕಾಯುಕ್ತ ಕಚೇರಿ, ಎಂ.ಎಸ್.ಬಿಲ್ಡಿಂಗ್, ಹೈಕೋರ್ಟ್ ಗೆ ಹೆಚ್ಚಿನ ಭದ್ರತೆ ಒದಗಿಸಲು ಭದ್ರತಾ ಲೆಕ್ಕಪರಿಶೋಧನೆ ನಡೆಸಲಾಗಿತ್ತು. ಕೊನೆಗೆ ಹೆಚ್ಚಿನ ಭದ್ರತೆಯಿಂದ ಲೋಕಾಯುಕ್ತ ಕಚೇರಿ ಮತ್ತು ಎಂ.ಎಸ್.ಬಿಲ್ಡಿಂಗ್ ನ್ನು ರದ್ದುಪಡಿಸಲಾಗಿತ್ತು. ಎಂ.ಎಸ್.ಬಿಲ್ಡಿಂಗ್ ನಲ್ಲಿ ಹಲವು ಅಧಿಕಾರಿಗಳು ಕೆಲಸ ಮಾಡುತ್ತಿರುವುದರಿಂದ ಅಲ್ಲಿಗೆ ಹೆಚ್ಚಿನ ಭದ್ರತೆ ಬೇಕೆಂದು ಉಪ ಲೋಕಾಯುಕ್ತರು ಕೂಡ ಈ ಹಿಂದೆ ಕಳವಳ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 60 ಸಾವಿರ ರೂ.ಗಳ ಆರ್ಥಿಕ ಬಲ- ಸಿಎಂ ಸಿದ್ದರಾಮಯ್ಯ

ಯೋಗ್ಯತಾ ಪರವಾನಗಿ ಇಲ್ಲದೆ ಎಂಟು ಬಾರಿ ವಿಮಾನ ಹಾರಾಟ: ಏರ್ ಇಂಡಿಯಾಕ್ಕೆ 1 ಕೋಟಿ ರೂ.ದಂಡ!

T-20 ವಿಶ್ವಕಪ್ 2026: ನೆದರ್ ಲ್ಯಾಂಡ್ಸ್ ವಿರುದ್ಧ 93 ರನ್ ಅಂತರದಿಂದ ಗೆದ್ದ ಅಮೆರಿಕ!

ಅಧಿಕಾರಿ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯರ ನಕಲಿ ಟಿಪ್ಪಣಿ: ಪೊಲೀಸ್ ಕೇಸ್ ದಾಖಲು!

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

SCROLL FOR NEXT