ಸಾಂದರ್ಭಿಕ ಚಿತ್ರ 
ರಾಜ್ಯ

ಆಡಳಿತ ಕೇಂದ್ರಗಳಲ್ಲಿ ಭದ್ರತೆ ಬಿಗಿಗೊಳಿಸಿ ಸುತ್ತೋಲೆ ಹೊರಡಿಸಿದ ಸರ್ಕಾರ

ಲೋಕಾಯುಕ್ತ ಕಚೇರಿಗೆ ಆಗಮಿಸಿ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಮೇಲೆ ವ್ಯಕ್ತಿಯೊಬ್ಬ ...

ಬೆಂಗಳೂರು: ಲೋಕಾಯುಕ್ತ ಕಚೇರಿಗೆ ಆಗಮಿಸಿ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಮೇಲೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಎಚ್ಚೆತ್ತುಕೊಂಡಿರುವ ಸರ್ಕಾರ ರಾಜ್ಯದ ಪ್ರಮುಖ ಆಡಳಿತ ಕೇಂದ್ರಗಳ ಭದ್ರತೆಯನ್ನು ತೀವ್ರಗೊಳಿಸಿ ಸುತ್ತೋಲೆ ಹೊರಡಿಸಿದೆ.

ಲೋಕಾಯುಕ್ತರ ಕಚೇರಿಯಲ್ಲಿ ನ್ಯಾಯಮೂರ್ತಿಗಳ ಮೇಲೆ ಹಲ್ಲೆ ನಡೆದ ಘಟನೆಯಿಂದಾಗಿ ಭದ್ರತಾ ವ್ಯವಸ್ಥೆಯಲ್ಲಿ ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅವಶ್ಯಕತೆಯಿರುತ್ತದೆ. ಆದುದರಿಂದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿನ ಸಚಿವಾಲಯದ ಎಲ್ಲಾ ಕಚೇರಿಗಳು ಸೇರಿದಂತೆ ಸಾರ್ವಜನಿಕ ಪ್ರವೇಶವನ್ನು ನಿಗಗದಿತ ಸಂದರ್ಶಕರ ಭೇಟಿ ಸಮಯಕ್ಕೆ ಮಿತಿಗೊಳಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಈ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಪ್ರತಿಯೊಬ್ಬ ಸಾರ್ವಜನಿಕರನ್ನು ಕೂಡ ಕೂಲಂಕುಷ ತಪಾಸಣೆಗೊಳಪಡಿಸಿ ಮತ್ತು ಅವರ ಬ್ಯಾಗುಗಳನ್ನು ಕಡ್ಡಾಯವಾಗಿ ಸ್ಕ್ಯಾನ್ ಮಾಡಿದ ನಂತರ ಲೋಹ ತಪಾಸಣಾ ಯಂತ್ರದ ಮೂಲಕ ಹಾದುಹೋಗಬೇಕೆಂಬ ನಿಯಮವನ್ನು ಕಟ್ಟುನಿಟ್ಟು ಮಾಡಲಾಗುವುದು. ಈ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ಲೋಪದೋಷ ಕಂಡುಬಂದಲ್ಲಿ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿಸಲಾಗುವುದು ಎಂದು ಸರ್ಕಾರದ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT