ಸಾಂದರ್ಭಿಕ ಚಿತ್ರ 
ರಾಜ್ಯ

ಆಡಳಿತ ಕೇಂದ್ರಗಳಲ್ಲಿ ಭದ್ರತೆ ಬಿಗಿಗೊಳಿಸಿ ಸುತ್ತೋಲೆ ಹೊರಡಿಸಿದ ಸರ್ಕಾರ

ಲೋಕಾಯುಕ್ತ ಕಚೇರಿಗೆ ಆಗಮಿಸಿ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಮೇಲೆ ವ್ಯಕ್ತಿಯೊಬ್ಬ ...

ಬೆಂಗಳೂರು: ಲೋಕಾಯುಕ್ತ ಕಚೇರಿಗೆ ಆಗಮಿಸಿ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಮೇಲೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಎಚ್ಚೆತ್ತುಕೊಂಡಿರುವ ಸರ್ಕಾರ ರಾಜ್ಯದ ಪ್ರಮುಖ ಆಡಳಿತ ಕೇಂದ್ರಗಳ ಭದ್ರತೆಯನ್ನು ತೀವ್ರಗೊಳಿಸಿ ಸುತ್ತೋಲೆ ಹೊರಡಿಸಿದೆ.

ಲೋಕಾಯುಕ್ತರ ಕಚೇರಿಯಲ್ಲಿ ನ್ಯಾಯಮೂರ್ತಿಗಳ ಮೇಲೆ ಹಲ್ಲೆ ನಡೆದ ಘಟನೆಯಿಂದಾಗಿ ಭದ್ರತಾ ವ್ಯವಸ್ಥೆಯಲ್ಲಿ ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅವಶ್ಯಕತೆಯಿರುತ್ತದೆ. ಆದುದರಿಂದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿನ ಸಚಿವಾಲಯದ ಎಲ್ಲಾ ಕಚೇರಿಗಳು ಸೇರಿದಂತೆ ಸಾರ್ವಜನಿಕ ಪ್ರವೇಶವನ್ನು ನಿಗಗದಿತ ಸಂದರ್ಶಕರ ಭೇಟಿ ಸಮಯಕ್ಕೆ ಮಿತಿಗೊಳಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಈ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಪ್ರತಿಯೊಬ್ಬ ಸಾರ್ವಜನಿಕರನ್ನು ಕೂಡ ಕೂಲಂಕುಷ ತಪಾಸಣೆಗೊಳಪಡಿಸಿ ಮತ್ತು ಅವರ ಬ್ಯಾಗುಗಳನ್ನು ಕಡ್ಡಾಯವಾಗಿ ಸ್ಕ್ಯಾನ್ ಮಾಡಿದ ನಂತರ ಲೋಹ ತಪಾಸಣಾ ಯಂತ್ರದ ಮೂಲಕ ಹಾದುಹೋಗಬೇಕೆಂಬ ನಿಯಮವನ್ನು ಕಟ್ಟುನಿಟ್ಟು ಮಾಡಲಾಗುವುದು. ಈ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ಲೋಪದೋಷ ಕಂಡುಬಂದಲ್ಲಿ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿಸಲಾಗುವುದು ಎಂದು ಸರ್ಕಾರದ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್