ಲೋಕಾಯುಕ್ತ ಕಚೇರಿಗೆ ಬರುವ ಜನರನ್ನು ತಪಾಸಣೆ ನಡೆಸುತ್ತಿರುವ ಪೊಲೀಸರು 
ರಾಜ್ಯ

ನ್ಯಾಯಮೂರ್ತಿ ಹತ್ಯೆ ಯತ್ನ ಬಳಿಕ ಎಚ್ಚೆತ್ತ ಸರ್ಕಾರ: ಲೋಕಾಯುಕ್ತ ಕಚೇರಿಗೆ ಕೊನೆಗೂ ಬಂತು ಮೆಟಲ್ ಡಿಟೆಕ್ಟರ್

ಲೋಕಾಯುಕ್ತ ನ್ಯಾ.ಪಿ.ವಿಶ್ವನಾಥ್ ಶೆಟ್ಟಿಯವರ ಮೇಲೆ ನಡೆದ ಹತ್ಯೆ ಯತ್ನ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ, ಲೋಕಾಯುಕ್ತ ಕಚೇರಿಗೆ ಹೊಸ ಮೆಟಲ್ ಡಿಟೆಕ್ಟರ್ ನ್ನು ಅಳವಡಿಸಿದೆ...

ಬೆಂಗಳೂರು: ಲೋಕಾಯುಕ್ತ ನ್ಯಾ.ಪಿ.ವಿಶ್ವನಾಥ್ ಶೆಟ್ಟಿಯವರ ಮೇಲೆ ನಡೆದ ಹತ್ಯೆ ಯತ್ನ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ, ಲೋಕಾಯುಕ್ತ ಕಚೇರಿಗೆ ಹೊಸ ಮೆಟಲ್ ಡಿಟೆಕ್ಟರ್ ನ್ನು ಅಳವಡಿಸಿದೆ. 
ಮುಖ್ಯ ದ್ವಾರದಲ್ಲಿ ಮೆಟಲ್ ಡಿಟೆಕ್ಟರ್ ಕೆಟ್ಟು ಹೋಗಿದ್ದರು ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳು ತಲೆ ಕೆಡಿಸಿಕೊಂಡಿರಲಿಲ್ಲ. ಸಂಸ್ಥೆಯಲ್ಲಿ ನಡೆದ ದುರಂತದ ಬಳಿಕ ಭದ್ರತಾ ವೈಫಲ್ಯದ ಕುರಿತು ಸಾಕಷ್ಟು ಟೀಕೆಗಳು ಕೇಳಿಬಂದಿತ್ತು. 
ಚಾಕು ಇರಿದ ಪ್ರಕರಣದ ಬಳಿಕ ಮೆಟಲ್ ಡಿಟೆಕ್ಟರ್ ಗಂಭೀರತೆಯನ್ನು ಅರಿದ ಸಿಬ್ಬಂದಿಗಳು ನಿನ್ನೆ ಬೆಳಿಗ್ಗೆಯೇ ಬದಲಿಸಲು ಮುಂದಾದರು. ಪ್ರವೇಶ ದ್ವಾರದಲ್ಲಿದ್ದ ಹಳೆಯ ಡಿಟೆಕ್ಟರ್'ನ್ನು ತೆಗೆದು ಹಾಕಿ ಹೊಸದಾಗಿ ಅಳವಡಿಸಿದರು. ಇದಲ್ಲದೆ ಲೋಕಾಯುಕ್ತ ಕೊಠಡಿಗೆ ತೆರಳುವ ಸ್ಥಳದಲ್ಲಿಯೂ ಮತ್ತೊಂದು ಡಿಟೆಕ್ಟರ್ ಅಳವಡಿಸುವ ಬಗ್ಗೆ ಚಿಂತನೆಗಳು ನಡೆಯುತ್ತಿವೆ ಎಂದು ಮೂಲಗಳು ಮಾಹಿತಿ ನೀಡಿವೆ. 
ಲೋಕಾಯುಕ್ತ ಕಚೇರಿಯಲ್ಲಿ ಒಟ್ಟು 5 ಮಹಡಿಗಳಿದ್ದು , ಪ್ರತೀಯೊಂದು ಮಹಡಿಯಲ್ಲಿಯೂ ಕನಿಷ್ಟ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಇದಲ್ಲದೆ, ಕಟ್ಟಡದಲ್ಲಿ ಮತ್ತಷ್ಟು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಚಿಂತನೆಗಳು ನಡೆಯುತ್ತಿವೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ: SIR ಕುರಿತ ಚರ್ಚೆಗೆ ವಿಪಕ್ಷಗಳಿಂದ ಪಟ್ಟು, ಸ್ಪಷ್ಟನೆ ನೀಡದ ಸರ್ಕಾರ

ಕುರ್ಚಿ ಕದನ: ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ನಡೆದ ಚರ್ಚೆ ಏನು?

' ನನ್ನ ರಾಜಕೀಯ ನೇರವಾದದ್ದು, ಯಾರ ಬೆನ್ನಿಗೂ ಚೂರಿ ಹಾಕಲ್ಲ, ನನ್ನ ಇತಿಮಿತಿ ತಿಳಿದಿದೆ- DKS ಸೈಲೆಂಟ್ ಗುಟ್ಟೇನು?

ಆತ್ಮ ನಿರ್ಭರತೆಯೆಡೆಗೆ ಮಹತ್ವದ ಮೈಲಿಗಲ್ಲು; ಕರ್ನಾಟಕ ಮೂಲದ ಸ್ಟಾರ್ಟ್ ಅಪ್ ನಿಂದ ಮೊದಲ ದೇಶೀಯ ರಕ್ಷಣಾ AI ತಂತ್ರಜ್ಞಾನ ಅಭಿವೃದ್ಧಿ!

ಶಿವಮೊಗ್ಗ: ಪಠ್ಯ ಪುಸ್ತಕಗಳಲ್ಲಿ 'ಭಗವದ್ಗೀತೆ' ಸೇರಿಸಲು ಕೇಂದ್ರಕ್ಕೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ!

SCROLL FOR NEXT