ಹೈ ಕೋರ್ಟ್ 
ರಾಜ್ಯ

ಕರ್ನಾಟಕ: ಹೈಕೋರ್ಟ್ ನ್ಯಾಯಮೂರ್ತಿಗಳ ಭದ್ರತೆ ಪರಿಶೀಲನೆಗೆ ಸಮಿತಿ

ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿ ಅವರ ಮೇಲೆ ನಡೆದ ಹತ್ಯೆ ಯತ್ನ ಪ್ರಕರಣ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಹೈಕೋರ್ಟ್, ಇದೀಗ ರಾಜ್ಯದಲ್ಲಿರುವ ತನ್ನ ಮೂರು ಪೀಠಗಳ, ನ್ಯಾಯಮೂರ್ತಿಗಳ ನಿವಾಸಗಳಿಗೆ ಭದ್ರತಾ ವ್ಯವಸ್ಥೆ...

ಬೆಂಗಳೂರು: ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿ ಅವರ ಮೇಲೆ ನಡೆದ ಹತ್ಯೆ ಯತ್ನ ಪ್ರಕರಣ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಹೈಕೋರ್ಟ್, ಇದೀಗ ರಾಜ್ಯದಲ್ಲಿರುವ ತನ್ನ ಮೂರು ಪೀಠಗಳ, ನ್ಯಾಯಮೂರ್ತಿಗಳ ನಿವಾಸಗಳಿಗೆ ಭದ್ರತಾ ವ್ಯವಸ್ಥೆ ಕಾರ್ಯನಿರ್ವಹಣೆಯ ವಿವಿಧ ಅಂಶಗಳ ಪರಿಶೀಲನೆಗೆ ಭದ್ರತಾ ಸಮಿತಿಯನ್ನು ರಚನೆ ಮಾಡಿದೆ. 
ಭದ್ರತಾ ಸಮಿತಿಯಲ್ಲಿ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿಯವರು ಇದ್ದಾರೆ, ಹಾಗೆಯೇ ಆಡಳಿತ ವಿಭಾಗದ ರಿಜಿಸ್ಟ್ರಾರ್ ಸಮಿತಿಯಲ್ಲಿ ಪ್ರೆಸೆಂಟಿಂಗ್ ಅಧಿಕಾರಿಯಾಗಿದ್ದಾರೆ. 
ಈ ಭದ್ರತಾ ಸಮಿತಿ ಹೈಕೋರ್ಟ್ ಬೆಂಗಳೂರು ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿ ಪೀಠ, ಮುಖ್ಯ ನ್ಯಾಯಮೂರ್ತಿ ಮತ್ತು ಎಲ್ಲಾ ನ್ಯಾಯಮೂರ್ತಿಗಳ ನಿವಾಸಿಗಳ ಭದ್ರತಾ ವ್ಯವಸ್ಥೆ ಕಾರ್ಯನಿರ್ವಹಣೆಯ ವಿವಿಧ ಅಂಶಗಳನ್ನು ಪರಿಶೀಲಿಸಲಿದೆ. 
ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರ ಆದೇಶದ ಅನುಸಾರ ಭದ್ರತಾ ಸಮಿತಿ ರಚಿಸಿ ರಿಜಿಸ್ಟ್ರಾರ್ ಜನರಲ್ ಅಶೋಕ್ ಜಿ. ನಿಜಗಣ್ಣನವರ್ ಮಾರ್ಚ್.7ರಂದು ಆದೇಶಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT