ಕರ್ನಾಟಕ ಹೈಕೋರ್ಟ್ 
ರಾಜ್ಯ

ವಿದ್ವತ್ ಡಿಸ್ ಚಾರ್ಜ್ ಬಗ್ಗೆ ಹೈಕೋರ್ಟ್ ಸಂಶಯ: ಮಾಧ್ಯಮಗಳ ವಿರುದ್ಧ ವಕೀಲರ ಆಕ್ಷೇಪ

ವಿದ್ವತ್ ಲೋಕನಾಥನ್ ಡಿಸ್ ಚಾರ್ಜ್ ಗೆ ಸಂಬಂಧಿಸಿದಂತೆ ಶಾಸಕ ಎನ್.ಎ ಹ್ಯಾರಿಸ್ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ವಿಷಯಕ್ಕೆ .,..

ಬೆಂಗಳೂರು: ವಿದ್ವತ್ ಲೋಕನಾಥನ್ ಡಿಸ್ ಚಾರ್ಜ್ ಗೆ ಸಂಬಂಧಿಸಿದಂತೆ ಶಾಸಕ ಎನ್.ಎ ಹ್ಯಾರಿಸ್ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ವಿಷಯಕ್ಕೆ ಸಂಬಂಧಿಸಿದಂತೆ ವಿಶೇಷ ಸಾರ್ವಜನಿಕ ಅಭಿಯೋಜಕ ಶ್ಯಾಮಸುಂದರ್ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
ಜಾಮೀನು ಕೋರಿ ನಲಪಾಡ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ಹಿರಿಯ ವಕೀಲ ಸಿ.ವಿ.ನಾಗೇಶ್‌ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ಮಂಡಿಸಿದ ವಾದ ಸರಣಿಯಿದು.
ವಿದ್ವತ್‌ಗೆ ದೇಹದ ಮೇಲೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಎಲ್ಲೊ ಒಂದು ಕೂದಲೆಳೆಯಷ್ಟು ಮೂಳೆ ಮುರಿದಿದೆ. ಫರ್ಜಿ ಕೆಫೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದೇ ಇಲ್ಲ. ಮಾಧ್ಯಮಗಳು ಅದರಲ್ಲೂ ಟಿ.ವಿ.ಚಾನೆಲ್‌ಗಳು ಈ ವಿಷಯವನ್ನೇ ದೊಡ್ಡದು ಮಾಡಿ ತೋರಿಸುತ್ತಿವೆ ಎಂದು ಆಕ್ಷೇಪಿಸಿದರು.
ವಿದ್ವತ್‌ಗೆ ಏನೂ ಆಗಿಲ್ಲ. ಆತ ಬೇಕಂತಲೇ ಆಸ್ಪತ್ರೆಯಲ್ಲಿ ಸುಖಾಸುಮ್ಮನೇ ಚಿಕಿತ್ಸೆ ಪಡೆಯುತ್ತಾ ಒಳರೋಗಿಯಾಗಿದ್ದಾನೆ. ಮನೆಗೆ ಹೋಗು ಎಂದರೆ ಒಂದಲ್ಲಾ ಒಂದು ನೆಪ ಹೇಳಿ ಹಾಸಿಗೆಗೆ ಅಂಟಿಕೊಂಡಿದ್ದಾನೆ. ಈತನ ಮೇಲೆ ಮೊಹಮದ್‌ ನಲಪಾಡ್‌ ಹ್ಯಾರಿಸ್‌ ಹಲ್ಲೆ ನಡೆಸಿಲ್ಲ. ಬೇಕಾದರೆ ವಿದ್ವತ್‌ ಆರೋಗ್ಯದ ಬಗ್ಗೆ ಮಲ್ಯ ಆಸ್ಪತ್ರೆ ವೈದ್ಯರು ಕೊಟ್ಟಿರುವ ವರದಿಯನ್ನೇ ನೋಡಿದರೆ ಸಾಕು. ಎಲ್ಲವೂ ಸ್ಪಷ್ಟವಾಗುತ್ತದೆ.
ದೂರು ದಾಖಲಾದ ನಂತರ ನಲಪಾಡ್‌ ಸ್ವತಃ ಪೊಲೀಸರಿಗೆ ಶರಣಾಗಿದ್ದಾರೆ. ಅವರು ವಿದ್ವತ್‌ ಮೇಲೆ ಹಲ್ಲೆ ಮಾಡುವ ಯಾವುದೇ ಉದ್ದೇಶ ಹೊಂದಿರಲಿಲ್ಲ. ಪೂರ್ವ ತಯಾರಿಯೂ ಅವರಿಗಿರಲಿಲ್ಲ. ಅಷ್ಟೇಕೆ, ಅವರು ಹಲ್ಲೆ ಪ್ರಯತ್ನವನ್ನೇ ಮಾಡಿಲ್ಲ. ಹಾಗಾಗಿ ಜಾಮೀನು ನೀಡಬೇಕು ಎಂದು ಕೋರಿದರು.
ದೂರುದಾರರು ಹೇಳಿದಂತೆ ಆರೋಪಿಗಳು ಯಾವುದೇ ಬಾಟಲಿ ಅಥವಾ ಮಾರಣಾಂತಿಕ ಆಯುಧ ಬಳಸಿಲ್ಲ’ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ‘ಒಡೆಯದ ಬಾಟಲಿಗಳನ್ನೂ ಮಾರಕ ಆಯುಧವಾಗಿ ಪ್ರಯೋಗಿಸಬಹುದಲ್ಲವೇ‘ ಎಂದು ಪ್ರಶ್ನಿಸಿದರು.
ನಾಗೇಶ್‌ ವಾದ ಸರಣಿಯನ್ನು ಬಲವಾಗಿ ಆಕ್ಷೇಪಿಸಿದ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್ ಎಂ.ಎಸ್‌.ಶ್ಯಾಮಸುಂದರ್, ‘ತನಿಖಾಧಿಕಾರಿಗಳು ವೈದ್ಯರ ವರದಿ ನೀಡುವಂತೆ ಹಲವು ಬಾರಿ ಕೇಳಿದ್ದರೂ ಕೊಟ್ಟಿಲ್ಲ. ವಾಸ್ತವದಲ್ಲಿ ಇದೊಂದು ಗೋಪ್ಯ ವರದಿ. ಇದನ್ನು ರೋಗಿ ಹೊರತುಪಡಿಸಿ ಬೇರಾರಿಗೂ ಕೊಡುವಂತಿಲ್ಲ. ಆದರೆ, ಇದು ವಕೀಲರ ಕೈಗೆ ಹೇಗೆ ದೊರೆಯಿತೊ’ ಎಂದು ಆಶ್ಚರ್ಯ ವ್ಯಕ್ತಪಡಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ವರದಿ ನೀಡಿರುವ ಡಾ.ಆನಂದ್‌ಗೆ ತನಿಖಾಧಿಕಾರಿ ನೋಟಿಸ್‌ ನೀಡಿದ್ದಾರೆ. ವೈದ್ಯಕೀಯ ಮಂಡಳಿಯಿಂದಲೂ ವಿವರಣೆ ಕೋರಲಾಗಿದೆ’ ಎಂದು ತಿಳಿಸಿದ ಶ್ಯಾಮಸುಂದರ್‌, ದೃಶ್ಯಾವಳಿಯ ವಿಡಿಯೊ ದಾಖಲೆಗಳನ್ನು ನ್ಯಾಯಪೀಠಕ್ಕೆ ಒಪ್ಪಿಸಿದರು. ವಿಚಾರಣೆಯನ್ನು ಇದೇ 12ಕ್ಕೆ ಮುಂದೂಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT