ಜೈಶಂಕರ್ 
ರಾಜ್ಯ

ಜೈಲಿನಲ್ಲಿ ಜೈಶಂಕರ್ ಆತ್ಮಹತ್ಯೆ: ಬಂಧಿಖಾನೆ ಇಲಾಖೆಗೆ ಎನ್ ಎಚ್ ಆರ್ ಸಿ ನೋಟಿಸ್

ಸೈಕೋ ಕಿಲ್ಲರ್, ಸರಣಿ ಅತ್ಯಾಚಾರಿ ಜೈಶಂಕರ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ .....

ಬೆಂಗಳೂರು: ಸೈಕೋ ಕಿಲ್ಲರ್, ಸರಣಿ ಅತ್ಯಾಚಾರಿ ಜೈಶಂಕರ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ ಎಚ್ ಆರ್ ಸಿ) ಶನಿವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಜೈಶಂಕರ್ ಆತ್ಮಹತ್ಯೆಗೆ ಜೈಲು ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಮಾಧ್ಯಮಗಳು ವರದಿ ಮಾಡಿದ ಹಿನ್ನೆಲೆಯಲ್ಲಿ ಸ್ವ.ಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿರುವ ಎನ್ ಎಚ್ ಆರ್ ಸಿ, ಕರ್ನಾಟಕ ಬಂಧಿಖಾನೆ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.
ಜೈಲು ಸಿಬ್ಬಂದಿಯ ನಿರ್ಲಕ್ಷ್ಯದಿಂದ ಜೈಶಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಧ್ಯಮಗಳ ವರದಿಯನ್ನು ನಾವು ಪರಿಶೀಲಿಸಿದ್ದು, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಬಂಧಿಖಾನೆಗೆ ಸೂಚಿಸಿದೆ. ಅಲ್ಲದೆ ಈ ಕುರಿತು ಆರು ವಾರಗಳಲ್ಲಿ ವಿಸ್ತೃತ ವರದಿ ನೀಡುವಂತೆ ಪೊಲೀಸ್ ಮಹಾ ನಿರ್ದೇಶಕ(ಬಂಧಿಖಾನೆ)ರಿಗೂ ನೋಟಿಸ್ ನೀಡಿದೆ.
ಅತ್ಯಾಚಾರ ಹಾಗೂ ಕೊಲೆಗಳ ಮೂಲಕ ತಮಿಳುನಾಡು ಮತ್ತು ಕರ್ನಾಟಕದ ಜನರನ್ನು ಬೆಚ್ಚಿ ಬೀಳಿಸಿದ್ದ ವಿಕೃತಕಾಮಿ ಸೈಕೋ ಜೈಶಂಕರ್‌ ಅಲಿಯಾಸ್‌ ಜೈ ಶಂಕರ್‌ (38) ಕಳೆದ ತಿಂಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ