ಜೈಶಂಕರ್ 
ರಾಜ್ಯ

ಜೈಲಿನಲ್ಲಿ ಜೈಶಂಕರ್ ಆತ್ಮಹತ್ಯೆ: ಬಂಧಿಖಾನೆ ಇಲಾಖೆಗೆ ಎನ್ ಎಚ್ ಆರ್ ಸಿ ನೋಟಿಸ್

ಸೈಕೋ ಕಿಲ್ಲರ್, ಸರಣಿ ಅತ್ಯಾಚಾರಿ ಜೈಶಂಕರ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ .....

ಬೆಂಗಳೂರು: ಸೈಕೋ ಕಿಲ್ಲರ್, ಸರಣಿ ಅತ್ಯಾಚಾರಿ ಜೈಶಂಕರ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ ಎಚ್ ಆರ್ ಸಿ) ಶನಿವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಜೈಶಂಕರ್ ಆತ್ಮಹತ್ಯೆಗೆ ಜೈಲು ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಮಾಧ್ಯಮಗಳು ವರದಿ ಮಾಡಿದ ಹಿನ್ನೆಲೆಯಲ್ಲಿ ಸ್ವ.ಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿರುವ ಎನ್ ಎಚ್ ಆರ್ ಸಿ, ಕರ್ನಾಟಕ ಬಂಧಿಖಾನೆ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.
ಜೈಲು ಸಿಬ್ಬಂದಿಯ ನಿರ್ಲಕ್ಷ್ಯದಿಂದ ಜೈಶಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಧ್ಯಮಗಳ ವರದಿಯನ್ನು ನಾವು ಪರಿಶೀಲಿಸಿದ್ದು, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಬಂಧಿಖಾನೆಗೆ ಸೂಚಿಸಿದೆ. ಅಲ್ಲದೆ ಈ ಕುರಿತು ಆರು ವಾರಗಳಲ್ಲಿ ವಿಸ್ತೃತ ವರದಿ ನೀಡುವಂತೆ ಪೊಲೀಸ್ ಮಹಾ ನಿರ್ದೇಶಕ(ಬಂಧಿಖಾನೆ)ರಿಗೂ ನೋಟಿಸ್ ನೀಡಿದೆ.
ಅತ್ಯಾಚಾರ ಹಾಗೂ ಕೊಲೆಗಳ ಮೂಲಕ ತಮಿಳುನಾಡು ಮತ್ತು ಕರ್ನಾಟಕದ ಜನರನ್ನು ಬೆಚ್ಚಿ ಬೀಳಿಸಿದ್ದ ವಿಕೃತಕಾಮಿ ಸೈಕೋ ಜೈಶಂಕರ್‌ ಅಲಿಯಾಸ್‌ ಜೈ ಶಂಕರ್‌ (38) ಕಳೆದ ತಿಂಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT