ಹೈಕೋರ್ಟ್ 
ರಾಜ್ಯ

ಪ್ರತ್ಯೇಕ ಧರ್ಮ ವಿವಾದ: ಪ್ರತಿಕ್ರಿಯೆ ನೀಡುವಂತೆ ರಾಜ್ಯ, ಕೇಂದ್ರಕ್ಕೆ 'ಹೈ' ಸೂಚನೆ

ವೀರಶೈವ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ...

ಬೆಂಗಳೂರು: ವೀರಶೈವ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ. 
ತಜ್ಞರ ಸಮಿತಿ ನೇಮಕಗೊಳಿಸಿ ರಾಜ್ಯ ಅಲ್ಪ ಸಂಖ್ಯಾತ ಆಯೋಗ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಎಂ. ಸತೀಶ್ ಸೇರಿದಂತೆ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ನಿನ್ನೆ ಪರಿಶೀಲನೆ ನಡೆಸಿರುವ ನ್ಯಾ.ದಿನೇಶ್ ಮಹೇಶ್ವರಿ ಹಾಗೂ ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಪೀಠ, ಪ್ರತ್ಯೇಕ ಧರ್ಮ ಕುರಿತಂತೆ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಸೂಚನೆ ನೀಡಿದೆ. ಈ ಮೂಲಕ ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆ ಕುರಿತು ತಜ್ಞರ ಸಮಿತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅನುಸರಿಸುವ ಪ್ರಕ್ರಿಯೆಗಳಲ್ಲಿ ತಾನು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. 
ವಿಚಾರಣೆ ವೇಳೆ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರದ ನಡಾವಳಿಗಳಿಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿ, ಮಾ.15ಕ್ಕೆ ವಿಚಾರಣೆಯನ್ನು ಮುಂದೂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT