ಸಾಂದರ್ಭಿಕ ಚಿತ್ರ 
ರಾಜ್ಯ

ಮೆಟ್ರೋ ನೌಕರರ ಮುಷ್ಕರ : ಕಾರ್ಮಿಕ ಇಲಾಖೆ ಆಯುಕ್ತರ ಮೂಲಕ ಸಂಧಾನಕ್ಕೆ ಮುಂದಾದ ಬಿಎಂಆರ್ ಸಿಎಲ್

ಮೆಟ್ರೋ ರೈಲು ನೌಕರರು ಇದೇ 22 ರಂದು ಮುಷ್ಕರಕ್ಕೆ ಕರೆ ನೀಡಿದ್ದು, ಪ್ರಾದೇಶಿಕ ಕಾರ್ಮಿಕ ಆಯುಕ್ತರೊಂದಿಗೆ ಬಿಎಂಆರ್ ಸಿಎಲ್ ಸಂಧಾನ ಪ್ರಕ್ರಿಯೆ ನಡೆಸುತ್ತಿದ್ದು, ತೀರ್ಪು ಬರುವವರೆಗೂ ಮುಷ್ಕರ ನಡೆಸದಂತೆ ನೌಕರರಿಗೆ ತಿಳಿಸಲಾಗಿದೆ.

ಬೆಂಗಳೂರು: ವೇತನ ಪರಿಷ್ಕರಣೆ, ಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಮ್ಮ ಮೆಟ್ರೋ ರೈಲು ನೌಕರರು ಇದೇ 22 ರಂದು ಮುಷ್ಕರಕ್ಕೆ ಕರೆ ನೀಡಿದ್ದು, ಪ್ರಾದೇಶಿಕ ಕಾರ್ಮಿಕ ಆಯುಕ್ತರ ಮೂಲಕ ಸಂಧಾನ ಮಾಡಿಸಲು ಬಿಎಂಆರ್ ಸಿಎಲ್  ಮುಂದಾಗಿದೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರ ಜೈನ್ , ಕೈಗಾರಿಕಾ ವಿವಾದ ಕಾಯ್ದೆ ಪ್ರಕಾರ ಸಂಧಾನ ನಡೆಸುವಂತೆ ಪ್ರಾದೇಶಿಕ ಕಾರ್ಮಿಕ ಆಯುಕ್ತರಿಗೆ ಮನವಿ ಮಾಡಲಾಗಿದೆ. ಮಾರ್ಚ್ 15 ರಂದು ವಿಚಾರಣೆ ನಡೆಯಲಿದೆ.  ಒಂದು ಬಾರಿ ವಿಚಾರಣೆ ಆರಂಭವಾದರೆ, ತೀರ್ಪು ಮುಗಿಯುವರೆಗೂ  ಮುಷ್ಕರ ನಡೆಸುವಂತಿಲ್ಲ ಎಂದು ಹೇಳಿದ್ದಾರೆ.

ಈ ವಿಚಾರಣೆ ಕೆಲವೇ ದಿನಗಳಲ್ಲಿ ಮುಗಿಯಬಹುದು ಅಥವಾ ಒಂದು ತಿಂಗಳು ಹಿಡಿಯಬಹುದು ಎಲ್ಲಾವೂ ಕಾರ್ಮಿಕ ಆಯುಕ್ತರ ಮೇಲೆ ಅವಲಂಬಿಸಿದೆ. ಆ  ಸಂದರ್ಭದಲ್ಲಿ ಮುಷ್ಕರ ನಡೆಸುವಂತಿಲ್ಲ ಎಂದು ವಕೀಲ ಅಶೋಕ್ ಹಾರನಹಳ್ಳಿ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ತೊಂದರೆ ನೀಡುವುದು ಮೆಟ್ರೋ ರೈಲು ಕಾಯ್ದೆ ಪ್ರಕಾರ ಶಿಕ್ಷಾರ್ಹವಾಗುತ್ತದೆ ಎಂದು ಬಿಎಂಆರ್ ಸಿಎಲ್ ಕಾರ್ಯಾಚರಣೆ ಮತ್ತು ನಿರ್ವಹಣಾ ವಿಭಾಗದ ಮುಖ್ಯ ನಿರ್ದೇಶಕರು ಮೆಟ್ರೋ ನೌಕರರಿಗೆ ಎಚ್ಚರಿಕೆ ನೀಡಿದ್ದಾರೆ.

ಮೆಟ್ರೋ ನೌಕರರ ವಿರುದ್ಧ ಎಸ್ಮಾ ಮೇಲಿನ ತಡೆಯಾಜ್ಞೆ  ತೆರವಿಗಾಗಿ  ಬಿಎಂಆರ್ ಸಿಎಲ್ ಅರ್ಜಿ ಸಲ್ಲಿಸಿದೆ.ಈ ಮಧ್ಯೆ ಕಾರ್ಮಿಕರ ಮನವಿ ಬಗ್ಗೆ ಚರ್ಚಿಸಲು ಆಡಳಿತ ಮಂಡಳಿ ಸಿದ್ಧವಿರುವುದಾಗಿ ಕಾರ್ಯನಿರ್ವಾಹಕ ನಿರ್ದೇಶಕ ಎ. ಎಸ್. ಶಂಕರ್ ತಿಳಿಸಿದ್ದಾರೆ.





Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ