ಓಂ ಪ್ರಕಾಶ್ ರಾವತ್ 
ರಾಜ್ಯ

ಸುಪ್ರೀಂಕೋರ್ಟ್ ತೀರ್ಪಿನ ನಂತರ ಗುರುತಿನ ಪತ್ರದೊಂದಿಗೆ ಆಧಾರ್ ಜೋಡಣೆ- ಓಂ ಪ್ರಕಾಶ್ ರಾವತ್

ಸುಪ್ರೀಂಕೋರ್ಟ್ ತೀರ್ಪಿನ ನಂತರ ಚುನಾವಣಾ ಆಯೋಗ ಗುರುತಿನ ಪತ್ರದೊಂದಿಗೆ ಆಧಾರ್ ಕಾರ್ಡ್ ಜೋಡಿಸಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಹೇಳಿದ್ದಾರೆ.

ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪಿನ ನಂತರ ಚುನಾವಣಾ ಆಯೋಗ ಗುರುತಿನ ಪತ್ರದೊಂದಿಗೆ ಆಧಾರ್ ಕಾರ್ಡ್ ಜೋಡಿಸಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಹೇಳಿದ್ದಾರೆ.

ಬೆಂಗಳೂರಿನ ಐಐಎಂನಲ್ಲಿ ನಡೆದ ಚುನಾವಣಾಧಿಕಾರಿ ಮತ್ತು ರಾಜಕೀಯ ಸುಧಾರಣೆ ಕುರಿತ 14 ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನದಲ್ಲಿ ಅವರು, ಚುನಾವಣಾ ಆಯೋಗ ಎದುರಿಸುವ ಅನೇಕ ಸಮಸ್ಯೆಗಳನ್ನು  ಹಂಚಿಕೊಂಡರು.

ತನ್ನ ಶಿಫಾರಸ್ಸುಗಳನ್ನು ಸರ್ಕಾರ ಯಾವ ರೀತಿ ಅನುಷ್ಠಾನಗೊಳಿಸುವ ಮೂಲಕ ಸುಧಾರಣೆ ತರಬಹುದು ಎಂಬ ಬಗ್ಗೆ ಸಲಹೆ ನೀಡಿದರು.

ಗುರುತಿನ ಚೀಟಿಯೊಂದಿಗೆ ಆಧಾರ್ ಜೋಡಣೆ ಮಾಡುವ ಕಾರ್ಯವನ್ನು 205ರಲ್ಲಿ ನಿಲ್ಲಿಸಲಾಗಿತ್ತು. ಆದರೆ ನಂತರ 87.50 ಕೋಟಿ ಮತದಾರರ 32 ಕೋಟಿ ಗುರುತಿನ ಪತ್ರವನ್ನು  ಜೋಡಣೆ ಮಾಡಲಾಗಿದೆ. ಉಳಿದಿರುವ 54 ಕೋಟಿ ಮತದಾರರ ಗುರುತಿನ ಪತ್ರ ಹಾಗೂ ಆಧಾರ್ ಜೋಡಣೆಯನ್ನು ಶೀಘ್ರದಲ್ಲಿಯೇ  ಪೂರ್ಣಗೊಳಿಸಲಾಗುವುದು ಎಂದರು.

ಗಂಭೀರ ರೀತಿಯ ಅಪರಾಧ ಪ್ರಕರಣ ಎದುರಿಸುತ್ತಿರುವ ಅಭ್ಯರ್ಥಿಯ ನೋಂದಣಿ ರದ್ದುಗೊಳಿಸಲು ರಾಜಕೀಯ ಪಕ್ಷಗಳಿಗೆ ತಿಳಿಸಲಾಗಿದೆ. ಅಲ್ಲದೇ ಚುನಾವಣೆಗಾಗಿ ಮಾಡಬೇಕಿದ ಖರ್ಚಿನ ಮೊತ್ತವನ್ನು ನಿಗದಿಗೊಳಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT