ರಾಜ್ಯ

ನನಗೂ ಅಪರಿಚಿತರಿಂದ ಬೆದರಿಕೆ ಕರೆಗಳು ಬರುತ್ತಿವೆ- ಮಲ್ಲಿಕಾರ್ಜುನ ಖರ್ಗೆ

Nagaraja AB

ಕಲಬುರಗಿ: ನನಗೂ ಅಪರಿಚಿತರಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

 ಕಲಬುರಗಿಯಲ್ಲಿಂದು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ನಾನು ಹಲವು ವರ್ಷಗಳಿಂದ ರಾಜಕೀಯದಲ್ಲಿದ್ದು, ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಆದರೆ. ತಮ್ಮಗೂ ಕೂಡಾ ಅಪರಿಚಿತರಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ತಿಳಿಸಿದರು.

ಕಳೆದ ಒಂದೂವರೆ ತಿಂಗಳುಗಳಿಂದ ಇಂತಹ ಕರೆಗಳು ಬರುತ್ತಿದ್ದು, ಕೇಂದ್ರ ಗೃಹ ಸಚಿವರು ಹಾಗೂ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಗಮನಕ್ಕೂ ತಂದಿದ್ದೇನೆ. ಈ ಸಂಬಂಧ ದೆಹಲಿಯ ತುಘಲಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ಹೇಳಿದರು.

ಯಾವುದೇ ಬೆದರಿಕೆ ಕರೆಗಳು ಬಂದರೂ ತಮ್ಮ ಜೀವ ಇರುವವರೆಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಮುಂದುವರೆಸುವುದಾಗಿ ಮಲ್ಲಿಕಾರ್ಜುನ ಖರ್ಗೆ ಇದೇ ವೇಳೆ ಹೇಳಿದರು.

SCROLL FOR NEXT