ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಸಂಭಾಷಣೆಯಲ್ಲಿ ಸಚಿವ ತನ್ವೀರ್ ಸೇಠ್ 
ರಾಜ್ಯ

ಶಾಲಿನಿ ರಜನೀಶ್ ರನ್ನು ಬೇರೆ ಇಲಾಖೆಗೆ ಕಳುಹಿಸಿ: ಮುಖ್ಯಮಂತ್ರಿಗೆ ಸಚಿವ ತನ್ವೀರ್ ಸೇಠ್ ಮನವಿ

ತಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನು ವರ್ಗಾವಣೆ ಮಾಡುವಂತೆ ಪ್ರಾಥಮಿಕ ಮತ್ತು ....

ಬೆಂಗಳೂರು: ತಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನು ವರ್ಗಾವಣೆ ಮಾಡುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

ಇತ್ತೀಚೆಗೆ ಇಲಾಖೆಯಲ್ಲಿ ಕೆಲವು ಬೆಳವಣಿಗೆಗಳು ನಡೆದಿದ್ದು ಪ್ರಧಾನ ಕಾರ್ಯದರ್ಶಿಗಳು ತಮ್ಮ ಒಪ್ಪಿಗೆ ತೆಗೆದುಕೊಳ್ಳದೆಯೇ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ಬೇಸರಗೊಂಡಿರುವ ತನ್ವೀರ್ ಸೇಠ್, ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಬೇರೆ ಇಲಾಖೆಗೆ ವರ್ಗಾಯಿಸುವಂತೆ ಮುಖ್ಯಮಂತ್ರಿಯವರನ್ನು ಕೋರಿದ್ದಾರೆ.

ಈ ಕುರಿತು ಮುಖ್ಯಮಂತ್ರಿಯವರಿಗೆ ತನ್ವೀರ್ ಸೇಠ್ ಅಧಿಕೃತ ಪತ್ರ ಬರೆದಿದ್ದಾರೆ ಎಂದು ಸಚಿವರ ಕಚೇರಿ ಮೂಲಗಳು ತಿಳಿಸಿವೆ. ರಾಜ್ಯದ ಶಾಲೆಗಳ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರ ಮಾಹಿತಿಗಳನ್ನು ಹಂಚಿಕೊಳ್ಳುವ ದಾಖಲೆಗಳಿಗೆ ಮಾಡಿಕೊಂಡ ಒಪ್ಪಂದ ಕುರಿತು ಪ್ರಧಾನ ಕಾರ್ಯದರ್ಶಿಗಳು ತೆಗೆದುಕೊಂಡಿರುವ ನಿರ್ಧಾರಗಳು ಸಚಿವರಿಗೆ ಬೇಸರ ತರಿಸಿವೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT