ರಾಜ್ಯ

ಶಾಲಿನಿ ರಜನೀಶ್ ರನ್ನು ಬೇರೆ ಇಲಾಖೆಗೆ ಕಳುಹಿಸಿ: ಮುಖ್ಯಮಂತ್ರಿಗೆ ಸಚಿವ ತನ್ವೀರ್ ಸೇಠ್ ಮನವಿ

Sumana Upadhyaya

ಬೆಂಗಳೂರು: ತಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನು ವರ್ಗಾವಣೆ ಮಾಡುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

ಇತ್ತೀಚೆಗೆ ಇಲಾಖೆಯಲ್ಲಿ ಕೆಲವು ಬೆಳವಣಿಗೆಗಳು ನಡೆದಿದ್ದು ಪ್ರಧಾನ ಕಾರ್ಯದರ್ಶಿಗಳು ತಮ್ಮ ಒಪ್ಪಿಗೆ ತೆಗೆದುಕೊಳ್ಳದೆಯೇ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ಬೇಸರಗೊಂಡಿರುವ ತನ್ವೀರ್ ಸೇಠ್, ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಬೇರೆ ಇಲಾಖೆಗೆ ವರ್ಗಾಯಿಸುವಂತೆ ಮುಖ್ಯಮಂತ್ರಿಯವರನ್ನು ಕೋರಿದ್ದಾರೆ.

ಈ ಕುರಿತು ಮುಖ್ಯಮಂತ್ರಿಯವರಿಗೆ ತನ್ವೀರ್ ಸೇಠ್ ಅಧಿಕೃತ ಪತ್ರ ಬರೆದಿದ್ದಾರೆ ಎಂದು ಸಚಿವರ ಕಚೇರಿ ಮೂಲಗಳು ತಿಳಿಸಿವೆ. ರಾಜ್ಯದ ಶಾಲೆಗಳ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರ ಮಾಹಿತಿಗಳನ್ನು ಹಂಚಿಕೊಳ್ಳುವ ದಾಖಲೆಗಳಿಗೆ ಮಾಡಿಕೊಂಡ ಒಪ್ಪಂದ ಕುರಿತು ಪ್ರಧಾನ ಕಾರ್ಯದರ್ಶಿಗಳು ತೆಗೆದುಕೊಂಡಿರುವ ನಿರ್ಧಾರಗಳು ಸಚಿವರಿಗೆ ಬೇಸರ ತರಿಸಿವೆ ಎನ್ನಲಾಗುತ್ತಿದೆ.

SCROLL FOR NEXT