ಹಲ್ಲೆ ಪ್ರಕರಣ: ಹೈಕೋರ್ಟ್ ನಲ್ಲಿ ನಲಪಾಡ್‌ಗೆ ಜಾಮೀನು ನಿರಾಕರಣೆ 
ರಾಜ್ಯ

ವಿದ್ವತ್ ಮೇಲೆ ಹಲ್ಲೆ ಪ್ರಕರಣ: ನಲಪಾಡ್ ಗೆ ಹೈ ಕೋರ್ಟ್ ಜಾಮೀನು ನಿರಾಕರಣೆ

ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮೊಹಮದ್ ನಲಪಾಡ್ ಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮೊಹಮದ್ ನಲಪಾಡ್ ಗೆ ಜಾಮೀನು ನೀಡಲು ಹೈಕೋರ್ಟ್  ನಿರಾಕರಿಸಿದೆ. ಇದರಿಂದ ಶಾಸಕ ಹ್ಯಾರಿಸ್‌ ಪುತ್ರ ನಲಪಾಡ್‌ಗೆ ಜೈಲು ವಾಸವೇ ಖಾಯಂ ಆಗಿದೆ.
ನ್ಯಾಯಮೂರ್ತಿ ಶ್ರೀನಿವಾಸ್ ​ಕುಮಾರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಈ ತೀರ್ಪು ಪ್ರಕಟಿಸಿದೆ. ಸೋಮವಾರ ನಡೆದ ವಿಚಾರಣೆ ವೇಳೆ ನ್ಯಾಯಾಲಯವು ಜಾಮೀನು ತೀರ್ಪನ್ನು ಇಂದಿಗೆ (ಬುಧವಾರ) ಕಾಯ್ದಿರಿಸಿತ್ತು.
ವಿದ್ವತ್ ಮೇಲೆ ದಾಳಿ ನಡೆಸಿರುವುದು ವೀಡಿಯೋ ದೃಶ್ಯಗಳಿಂದ ಸಾಬೀತಾಗಿದೆ. ನಲಪಾಡ್ ಪ್ರಭಾವಿ ವ್ಯಕ್ತಿಯ ಮಗ. ಅವನು ಅದಾಗಲೇ ವಿದ್ವತ್ ನ ವೈದ್ಯಕೀಯ ದಾಖಲೆಗಳ ಪ್ರತಿ ಪಡೆದುಕೊಂಡಿರುವುದು ಅವನ ಪ್ರಭಾವೀ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ. ಹೀಗಾಗಿ ಪ್ರಕರಣದ ತನಿಖೆ ಪೂರ್ಣವಾಗುವವರೆಗೆ ಜಾಮೀನು ನೀಡುವುದಕ್ಕೆ ಆಗದು ಎಂದು ನ್ಯಾಯಮೂರ್ತಿಗಳು ಹೇಳಿದರು.
ಫೆ.16ರಂದು ವಿದ್ವತ್ ಮೇಲೆ ಹಲ್ಲೆ ನಡೆಸಿದ್ದ ನಲಪಾಡ್ ಹಾಗೂ ಸಹಚರರನ್ನು ಫೆ.21ರಂದು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಕಳೆದ 22 ದಿನಗಳಿಂದ ಶಾಸಕರ ಪುತ್ರ ನಲಪಾಡ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT