ಸಾಂದರ್ಭಿಕ ಚಿತ್ರ 
ರಾಜ್ಯ

ಸಂಧಾನ ಮಾತುಕತೆ ವಿಫಲ: ಮಾ.22ರಂದು ಮುಷ್ಕರಕ್ಕೆ ಮೆಟ್ರೊ ಸಿಬ್ಬಂದಿ ನಿರ್ಧಾರ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಾರ್ಚ್ 22ರಂದು ಮುಷ್ಕರಕ್ಕೆ ಕರೆ ನೀಡಿರುವ ಮೆಟ್ರೊ ಸಿಬ್ಬಂದಿಯ ಪ್ರತಿನಿಧಿಗಳ....

ಬೆಂಗಳೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಾರ್ಚ್ 22ರಂದು ಮುಷ್ಕರಕ್ಕೆ ಕರೆ ನೀಡಿರುವ ಮೆಟ್ರೊ ಸಿಬ್ಬಂದಿಯ ಪ್ರತಿನಿಧಿಗಳ ಜತೆ ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್‌ಸಿಎಲ್‌) ಆಡಳಿತ ಮಂಡಳಿ ಬುಧವಾರ ಬೈಯಪ್ಪನಹಳ್ಳಿ ಡಿಪೋದಲ್ಲಿ ನಡೆಸಿದ ಸಂಧಾನ ಸಭೆ ವಿಫಲವಾಗಿದೆ.
ಆಡಳಿತ ಮಂಡಳಿ ನೌಕರರ ಕೆಲವು ಬೇಡಿಕೆಗಳನ್ನು ಮೂರು ತಿಂಗಳಲ್ಲಿ ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಆದರೆ ಮಾರ್ಚ್ 21ರೊಳಗೆ ಪ್ರಮುಖ ಬೇಡಿಕೆಗಳಾದ ವೇತನ ಪರಿಷ್ಕರಣೆ, ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದು, ತಾರತಮ್ಯ ನಿವಾರಣೆ ಮಾಡದಿದ್ದರೆ 22ರಂದು ಮುಷ್ಕರ ನಡೆಸಲು ಮೆಟ್ರೊ ಸಿಬ್ಬಂದಿ ನಿರ್ಧರಿಸಿದ್ದಾರೆ.
ಬಿಎಂಆರ್ ಸಿಎಲ್ ಕಾರ್ಯಾಚರಣೆ ಹಾಗೂ ನಿರ್ವಹಣೆ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕ ಶಂಕರ್‌ ನೇತೃತ್ವದಲ್ಲಿ ಸಭೆ ನಡೆಯಿತು. ಮೆಟ್ರೊ ರೈಲು ಚಾಲಕರು, ನಿಲ್ದಾಣ ನಿಯಂತ್ರಕರು, ಸೆಕ್ಷನ್‌ ಎಂಜಿನಿಯರ್‌ಗಳು, ಸಿಗ್ನಲಿಂಗ್‌, ಟೆಲಿಕಾಂ, ಸ್ವಯಂಚಾಲಿತ ದರ ವಸೂಲಿ (ಎಎಫ್‌ಸಿ), ಹಳಿಯ ಶಾಶ್ವತ ನಿರ್ವಹಣೆ, ಟ್ರ್ಯಾಕ್ಷನ್‌, ಸಿವಿಲ್‌ ಕಾಮಗಾರಿ ವಿಭಾಗಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಮಾರ್ಚ್ 16ರಂದು ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿಯಲ್ಲಿ ಎರಡನೇ ಸುತ್ತಿನ ಮಾತುಕತೆಗೆ ಕರೆಯಲಾಗಿದೆ. ಇಲ್ಲೂ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ, 22ರಂದು ಮುಷ್ಕರ ನಡೆಸುತ್ತೇವೆ ಎಂದು  ಬಿಎಂಆರ್‌ಸಿಎಲ್‌ ನೌಕರರ ಸಂಘದ ಉಪಾಧ್ಯಕ್ಷ ಸೂರ್ಯನಾರಾಯಣಮೂರ್ತಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT