ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿ: ಮದ್ಯ ಮಾರಾಟ ಉತ್ತೇಜಿಸಲು ಗ್ರಾಹಕರಿಗೆ ಆಟೋದಲ್ಲಿ ಉಚಿತ ಪ್ರಯಾಣ

ಕಾರ್ಕಳ ತಾಲೂಕಿನ ಅಜೇಕರ್ ಗ್ರಾಮದ ಬಾರ್ ನ ಮಾಲೀಕರೊಬ್ಬರು ತಮ್ಮ ವ್ಯಾಪಾರ ಉತ್ತೇಜನಗೊಳಿಸಲು ಗ್ರಾಹಕರಿಗೆ ಉಚಿತವಾಗಿ ಪ್ರಯಾಣ ವ್ಯವಸ್ಥೆ ಮಾಡಿದ್ದಾರೆ....

ಉಡುಪಿ: ಕಾರ್ಕಳ ತಾಲೂಕಿನ ಅಜೇಕರ್ ಗ್ರಾಮದ  ಬಾರ್ ನ ಮಾಲೀಕರೊಬ್ಬರು ತಮ್ಮ ವ್ಯಾಪಾರ ಉತ್ತೇಜನಗೊಳಿಸಲು ಗ್ರಾಹಕರಿಗೆ ಉಚಿತವಾಗಿ ಪ್ರಯಾಣ ವ್ಯವಸ್ಥೆ ಮಾಡಿದ್ದಾರೆ.
ಅಜೇಕರ್ ನ ಮಾರುಕಟ್ಟೆ ರಸ್ತೆಯಲ್ಲಿರುವ ರಚನಾ ಬಾರ್ ಮತ್ತು ರೆಸ್ಟೋರೆಂಟ್ ಮಾಲೀಕ ನವೀನ್ ಆಟೋ ರಿಕ್ಷಾದಲ್ಲಿ ತಮ್ಮ ಗ್ರಾಹಕರಿಗೆ ಉಚಿತವಾಗಿ ಸಂಚಾರ ಏರ್ಪಡಿಸಿದ್ದಾರೆ. ಹೆದ್ದಾರಿಗಳಿಂದ 500 ಮೀಟರ್ ವ್ಯಾಪ್ತಿಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ಗಳನ್ನು, ಮುಚ್ಚಬೇಕೆಂದು ಸುಪ್ರೀಂಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಬಾರ್ ಗಳಲ್ಲಿ ವ್ಯಾಪಾರ ಕುಸಿದಿದೆ.
ಆಟೋ ರಿಕ್ಷಾದ ಮೇಲೆ ಉಚಿತ ಪ್ರಯಾಣ ಎಂದು ಬರೆದಿರುವ ಬ್ಯಾನರ್ ಹಾಕಿಕೊಂಡು, ನವೀನ್ ಮುಖ್ಯರಸ್ತೆಯಿಂದ ಬಾರ್ ಗೆ ತಮ್ಮ ಆಟೋದಲ್ಲೇ ಡ್ರಾಪ್ ನೀಡುತ್ತಿದ್ದಾರೆ. ಸೋಮವಾರ ಪೂರ್ತಿ ದಿನ ಆಟೋವನ್ನು ಈ ಕೆಲಸಕ್ಕೆ ಬಳಸಿಕೊಂಡಿದ್ದಾರೆ. 
ಕೇವಲ ಅರ್ಧ ಗಂಟೆಯಲ್ಲೇ ಅಜೇಕರ್ ಪೊಲೀಸ್ ಠಾಣೆಯಿಂದ ಬಂದ ಪೊಲೀಸರು ನವೀನ್ ಗೆ ಎಚ್ಚರಿಕೆ ನೀಡಿದ್ದಾರೆ. ನವೀನ್ ಮಾಡುತ್ತಿರುವ ಕೆಲಸದಿಂದ ಕರ್ನಾಟಕ ಅಬಕಾರಿ ಕಾಯ್ದೆ ಉಲ್ಲಂಘನೆಯಾಗಿದೆ, ಶೀಘ್ರವೇ ನವೀನ್ ತಮ್ಮ ಉಚಿತ ಸೇವೆ ನಿಲ್ಲಿಸಬೇಕೆಂದು ಇನ್ಸ್ ಪೆಕ್ಟರ್ ರೋಸಾರಿಯಾ ಡಿಸೋಜಾ ಹೇಳಿದ್ದಾರೆ. ಜೊತೆಗೆ ನವೀನ್ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆ ಅನ್ವಯ ಎಫ್ ಐ ಆರ್ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT