ಸಾಂದರ್ಭಿಕ ಚಿತ್ರ 
ರಾಜ್ಯ

ಖೋಟಾ ನೋಟು ಚಲಾವಣೆ ಅಡ್ಡೆ ಮೇಲೆ ಎನ್ಐಎ ದಾಳಿ: ಇಬ್ಬರ ಬಂಧನ

ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಅಡ್ಡೆ ಮೇಲೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ...

ಬೆಳಗಾವಿ: ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಅಡ್ಡೆ ಮೇಲೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. 
ಚಕ್ಕೋಡಿ ನಿವಾಸಿ ಅಶೋಕ್ ಕಂಬಾರ್ (45) ಮತ್ತು ಪಶ್ಚಿಮ ಬಂಗಾಳ ನಿವಾಸಿ ದಾಲಿಮ್ ಮಿಯಾ (21) ಬಂಧನಕ್ಕಳಗಾದ ಆರೋಪಿಗಳಾಗಿದ್ದಾರೆ.
ಮಿಯಾ ಖೋಟಾನೋಟು ಚಲಾವಣೆ ದಂಧೆಯಲ್ಲಿ ಪಾಲ್ಗೊಂಡಿದ್ದ. ಕೆಲ ದಿನಗಳ ಹಿಂದಷ್ಟೇ ಮಿಯಾ ಎಂಬಾತನನ್ನು ಪೊಲೀಸರು ಪುಣೆಯಲ್ಲಿ ಬಂಧನಕ್ಕೊಳಪಡಿಸಿದ್ದರು. ವಿಚಾರಣೆ ವೇಳೆ ಚಿಕ್ಕೋಡಿ ತಾಲೂಕು ನಿಪ್ಪಾಣಿ ಪಟ್ಟಣದಲ್ಲಿ ಕೆ ದಿನ ವಾಸವಾಗಿರುವ ಕುರಿತು ಮಿಯಾ ಬಾಯ್ಬಿಟ್ಟಿದ್ದ. ಅಲ್ಲದೆ, ಕೆಲ ಸ್ಥಳೀಯರೊಂದಿಗೆ ಸೇರಿಕೊಂಡು ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಖೋಟಾನೋಟು ಚಲಾವಣೆ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದ. 
ಮಿಯಾ ಕೊಟ್ಟ ಮಾಹಿತಿಯನ್ವಯ ಬೆಳಗಾವಿಯ ಖೋಟಾನೋಟು ಅಡ್ಡೆ ಮೇಲೆ ದಾಳಇ ನಡೆಸಿದ ಎನ್ಐಎ ರೂ.2 ಸಾವಿರ ಮುಖಬೆಲೆಯ 41 ಖೋಟಾನೋಟುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT