ಗೌರಿ ಲಂಕೇಶ್ 
ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ತನಿಖಾ ಸಂಸ್ಥೆಗಳಿಂದ ನವೀನ್ ವಿಚಾರಣೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಕೆ.ಟಿ ನವೀನ್ ಕುಮಾರ್ ನನ್ನು ಹಲವು ತನಿಖಾ ಸಂಸ್ಥೆಗಳು ವಿಚಾರಣೆಗೊಳಪಡಿಸಿವೆ....

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಕೆ.ಟಿ ನವೀನ್ ಕುಮಾರ್ ನನ್ನು ಹಲವು ತನಿಖಾ ಸಂಸ್ಥೆಗಳು ವಿಚಾರಣೆಗೊಳಪಡಿಸಿವೆ.
ಸಿಬಿಐ ಸೇರಿದಂತೆ ಮಹಾರಾಷ್ಟ್ರ ಎಸ್‌ಐಟಿ ಹಾಗೂ ತೆಲಂಗಾಣದ ‘ಆಕ್ಟೋಪಸ್’ (ಭಯೋತ್ಪಾದನಾ ನಿಗ್ರಹ ತಂಡ) ಅಧಿಕಾರಿಗಳು ಮೂರು ದಿನಗಳಿಂದ ನಗರದಲ್ಲಿ ಬೀಡುಬಿಟ್ಟಿದ್ದು ನವೀನ್ ಕುಮಾರ್ ಹೇಳಿಕೆ ಪಡೆಯುತ್ತಿದ್ದಾರೆ ಎಂದು ಪ್ರಕರಣದ ತನಿಖಾಧಿಕಾರಿಯಾಗಿರುವ ಪಶ್ಚಿಮ ವಿಭಾಗದ ಡಿಸಿಪಿ ಅನುಚೇತ್ ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ನಗರದಲ್ಲಿ ಬೀಡು ಬಿಟ್ಟಿರುವ ಅಧಿಕಾರಿಗಳು ಗೋವಿಂದ್ ಪನ್ಸಾರೆ ಹಾಗೂ ನರೇಂದ್ರ ದಾಬೋಲ್ಕರ್ ಅವರ ಹತ್ಯೆ ಪ್ರಕರಣಗಳ ಕುರಿತು ವಿಚಾರಣೆ ಮುಂದುವರಿಸಿದ್ದಾರೆ.
ನವೀನ್ ಪದೇ ಪದೇ ಹೇಳಿಕೆಗಳನ್ನು ಬದಲಿಸುತ್ತಿದ್ದಾನೆ. ಹೀಗಾಗಿ, ಆತನನ್ನು ಮಂಪರು ಪರೀಕ್ಷೆಗೆ ಒಳ‍ಪಡಿಸಲು ಅನುಮತಿ ನೀಡಬೇಕು ಎಂದು ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸೋಮವಾರ (ಮಾರ್ಚ್ 12) ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಮಂಪರು ಪರೀಕ್ಷೆ ಎದುರಿಸಲು ಆರೋಪಿ ಒಪ್ಪಿದ್ದರಿಂದ ಅದಕ್ಕೆ ಅನುಮತಿ ನೀಡಿತ್ತು.
ಆರೋಪಿಯನ್ನು ಯಾವ ದಿನಾಂಕದಂದು ಕರೆದುಕೊಂಡು ಬರಬೇಕು ಹಾಗೂ ಪರೀಕ್ಷೆಗೆ ಪೂರ್ಣಗೊಳ್ಳಲು ಎಷ್ಟು ದಿನ ಬೇಕಾಗಬಹುದು ಎಂದು ಪತ್ರದಲ್ಲಿ ಕೇಳಿದ್ದೇವೆ. ಅಲ್ಲಿನ ಅಧಿಕಾರಿಗಳಿಂದ ಪ್ರತಿಕ್ರಿಯೆ ಬಂದ ಕೂಡಲೇ, ನ್ಯಾಯಾಲಯದ ಗಮನಕ್ಕೆ ತಂದು ಆರೋಪಿಯನ್ನು ಮಂಪರು ಪರೀಕ್ಷೆಗೆ ಕರೆದೊಯ್ಯುತ್ತೇವೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!