ಗೌರಿ ಲಂಕೇಶ್ 
ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ತನಿಖಾ ಸಂಸ್ಥೆಗಳಿಂದ ನವೀನ್ ವಿಚಾರಣೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಕೆ.ಟಿ ನವೀನ್ ಕುಮಾರ್ ನನ್ನು ಹಲವು ತನಿಖಾ ಸಂಸ್ಥೆಗಳು ವಿಚಾರಣೆಗೊಳಪಡಿಸಿವೆ....

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಕೆ.ಟಿ ನವೀನ್ ಕುಮಾರ್ ನನ್ನು ಹಲವು ತನಿಖಾ ಸಂಸ್ಥೆಗಳು ವಿಚಾರಣೆಗೊಳಪಡಿಸಿವೆ.
ಸಿಬಿಐ ಸೇರಿದಂತೆ ಮಹಾರಾಷ್ಟ್ರ ಎಸ್‌ಐಟಿ ಹಾಗೂ ತೆಲಂಗಾಣದ ‘ಆಕ್ಟೋಪಸ್’ (ಭಯೋತ್ಪಾದನಾ ನಿಗ್ರಹ ತಂಡ) ಅಧಿಕಾರಿಗಳು ಮೂರು ದಿನಗಳಿಂದ ನಗರದಲ್ಲಿ ಬೀಡುಬಿಟ್ಟಿದ್ದು ನವೀನ್ ಕುಮಾರ್ ಹೇಳಿಕೆ ಪಡೆಯುತ್ತಿದ್ದಾರೆ ಎಂದು ಪ್ರಕರಣದ ತನಿಖಾಧಿಕಾರಿಯಾಗಿರುವ ಪಶ್ಚಿಮ ವಿಭಾಗದ ಡಿಸಿಪಿ ಅನುಚೇತ್ ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ನಗರದಲ್ಲಿ ಬೀಡು ಬಿಟ್ಟಿರುವ ಅಧಿಕಾರಿಗಳು ಗೋವಿಂದ್ ಪನ್ಸಾರೆ ಹಾಗೂ ನರೇಂದ್ರ ದಾಬೋಲ್ಕರ್ ಅವರ ಹತ್ಯೆ ಪ್ರಕರಣಗಳ ಕುರಿತು ವಿಚಾರಣೆ ಮುಂದುವರಿಸಿದ್ದಾರೆ.
ನವೀನ್ ಪದೇ ಪದೇ ಹೇಳಿಕೆಗಳನ್ನು ಬದಲಿಸುತ್ತಿದ್ದಾನೆ. ಹೀಗಾಗಿ, ಆತನನ್ನು ಮಂಪರು ಪರೀಕ್ಷೆಗೆ ಒಳ‍ಪಡಿಸಲು ಅನುಮತಿ ನೀಡಬೇಕು ಎಂದು ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸೋಮವಾರ (ಮಾರ್ಚ್ 12) ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಮಂಪರು ಪರೀಕ್ಷೆ ಎದುರಿಸಲು ಆರೋಪಿ ಒಪ್ಪಿದ್ದರಿಂದ ಅದಕ್ಕೆ ಅನುಮತಿ ನೀಡಿತ್ತು.
ಆರೋಪಿಯನ್ನು ಯಾವ ದಿನಾಂಕದಂದು ಕರೆದುಕೊಂಡು ಬರಬೇಕು ಹಾಗೂ ಪರೀಕ್ಷೆಗೆ ಪೂರ್ಣಗೊಳ್ಳಲು ಎಷ್ಟು ದಿನ ಬೇಕಾಗಬಹುದು ಎಂದು ಪತ್ರದಲ್ಲಿ ಕೇಳಿದ್ದೇವೆ. ಅಲ್ಲಿನ ಅಧಿಕಾರಿಗಳಿಂದ ಪ್ರತಿಕ್ರಿಯೆ ಬಂದ ಕೂಡಲೇ, ನ್ಯಾಯಾಲಯದ ಗಮನಕ್ಕೆ ತಂದು ಆರೋಪಿಯನ್ನು ಮಂಪರು ಪರೀಕ್ಷೆಗೆ ಕರೆದೊಯ್ಯುತ್ತೇವೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT