ಸಾಂದರ್ಭಿಕ ಚಿತ್ರ 
ರಾಜ್ಯ

ಶೀಘ್ರವೇ ಬೆಂಗಳೂರು ರಸ್ತೆಗಿಳಿಯಲಿವೆ 40 ಎಲೆಕ್ಟ್ರಿಕ್ ಬಸ್ ಗಳು!

ನಗರದ ಪ್ರಮುಖ ರಸ್ತೆಗಳಲ್ಲಿ 40 ಬಸ್ ಗಳು ಶೀಘ್ರವೇ ಸಂಚರಿಸಲಿವೆ.ಹೈದರಾಬಾದ್ ಮೂಲದ ಗೋಲ್ಡ್ ಸ್ಟೋನ್ ಕಂಪನಿಯಿಂದ ಬಸ್ ಗಳನ್ನು ...

ಬೆಂಗಳೂರು: ನಗರದ ಪ್ರಮುಖ ರಸ್ತೆಗಳಲ್ಲಿ 40 ಬಸ್ ಗಳು ಶೀಘ್ರವೇ ಸಂಚರಿಸಲಿವೆ.ಹೈದರಾಬಾದ್ ಮೂಲದ ಗೋಲ್ಡ್ ಸ್ಟೋನ್ ಕಂಪನಿಯಿಂದ ಬಸ್ ಗಳನ್ನು ಲೀಸ್ ಗೆ ತೆಗೆದುಕೊಳ್ಳಲಾಗುತ್ತಿದೆ.  
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಐಟಿ ಕಾರಿಡಾರ್ ಮಾರ್ಗಗಳಲ್ಲಿ ಬಸ್ ಗಳು ಸಂಚರಿಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 150 ಎಲೆಕ್ಟ್ರಿಕ್‌ ಬಸ್‌ಗಳ ಪೈಕಿ ಸದ್ಯಕ್ಕೆ 40 ಬಸ್‌ಗಳನ್ನು ಗುತ್ತಿಗೆ ಆಧಾರದಲ್ಲಿ ಪಡೆಯಲು ಕೇಂದ್ರ ಸರಕಾರದಿಂದ ಅನುಮೋದನೆ ಸಿಕ್ಕಿದೆ. 
ಒಂದು ಎಲೆಕ್ಟ್ರಿಕ್‌ ಬಸ್‌ಗೆ 1 ರಿಂದ 2 ಕೋಟಿ ರೂ. ನೀಡಿ ಗುತ್ತಿಗೆ ಆಧಾರದಲ್ಲಿ ಪಡೆಯಲಾಗುತ್ತದೆ. ಇದರಲ್ಲಿ 85 ಲಕ್ಷ ರೂ.ನಿಂದ 1 ಕೋಟಿ ರೂ. ಸಹಾಯಧನವನ್ನು ಕೇಂದ್ರ ಸರಕಾರದಿಂದ ನಿರೀಕ್ಷಿಸಲಾಗಿತ್ತು. ಮೊದಲ ಹಂತದಲ್ಲಿ ಪಡೆಯುತ್ತಿರುವ 40 ಬಸ್‌ಗಳಿಗೆ ಕೇಂದ್ರದಿಂದ 40 ಕೋಟಿ ರೂ. ದೊರೆಯುವುದು ಖಚಿತವಾಗಿದೆ.
150 ಎಲೆಕ್ಟ್ರಿಕ್‌ ಬಸ್‌ಗಳು ಒಂದೇ ಬಾರಿಗೆ ರಸ್ತೆಗಿಳಿಯುವ ನಿರೀಕ್ಷೆಯಿತ್ತು. ಆದರೆ ಯೋಜನೆಯಲ್ಲಿರುವ ಅವಕಾಶದಂತೆ ಮೊದಲಿಗೆ 40 ಬಸ್‌ಗಳನ್ನು ಮಾತ್ರ ಪಡೆಯಲಾಗುತ್ತಿದೆ. ಫೆ.19 ಕ್ಕೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ನಂತರ ಕೆಲವೇ ದಿನಗಳಲ್ಲಿ ಅರ್ಹ ಗುತ್ತಿಗೆದಾರರನ್ನು ಅಂತಿಮಗೊಳಿಸಲಾಗುತ್ತದೆ. 
ಎಲೆಕ್ಟ್ರಿಕ್‌ ಬಸ್‌ಗಳನ್ನು ಬಿಎಂಟಿಸಿ ಚಾಲಕರು ಚಾಲನೆ ಮಾಡುವಂತಿಲ್ಲ. ಗುತ್ತಿಗೆ ಪಡೆಯುವ ಸಂಸ್ಥೆಯು ತರಬೇತಿ ನೀಡಿದ ತಮ್ಮದೇ ಚಾಲಕರನ್ನು ಇದಕ್ಕೆ ನೇಮಿಸಲಿದೆ. ಇದರ ಜತೆಗೆ ಬಿಎಂಟಿಸಿ ಡಿಪೊದಲ್ಲಿ ಚಾರ್ಜಿಂಗ್‌ ವ್ಯವಸ್ಥೆಯನ್ನೂ ಮಾಡಿಕೊಳ್ಳಬೇಕು. ಪ್ರತಿ ಕಿ.ಮೀ. ದರ ಹಾಗೂ ಚಾರ್ಜಿಂಗ್‌ ಮಾಡಿಕೊಳ್ಳಲು ವಿದ್ಯುತ್‌ ವೆಚ್ಚವನ್ನು ಬಿಎಂಟಿಸಿ ಭರಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT