ರಾಮಲಿಂಗಾರೆಡ್ಡಿ 
ರಾಜ್ಯ

ರೌಡಿಗಳು, ಅತ್ಯಾಚಾರಿಗಳನ್ನು ಮುಲಾಜಿಲ್ಲದೇ ಶೂಟ್ ಮಾಡಿ: ರಾಮಲಿಂಗಾರೆಡ್ಡಿ

ರೌಡಿಗಳು, ಸರಗಳ್ಳರು, ಹಾಗೂ ಅತ್ಯಾಚಾರಿಗಳನ್ನು ಮುಲಾಜಿಲ್ಲದೇ ಶೂಟ್ ಮಾಡುವಂತೆ ಪೊಲೀಸರಿಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ....

ಬೆಂಗಳೂರು: ರೌಡಿಗಳು, ಸರಗಳ್ಳರು, ಹಾಗೂ ಅತ್ಯಾಚಾರಿಗಳನ್ನು ಮುಲಾಜಿಲ್ಲದೇ ಶೂಟ್ ಮಾಡುವಂತೆ  ಗೃಹ ಸಚಿವ ರಾಮಲಿಂಗಾ ರೆಡ್ಡಿ ಪೊಲೀಸರಿಗೆ ಸ್ಪಷ್ಟ  ಸಂದೇಶ ರವಾನಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ರೌಡಿಗಳು ಪೊಲೀಸರ ಮೇಲೆ ನಡೆಸಿದ ದಾಳಿ ಹಾಗೂ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿಯ ಮಂಗಳ ಸೂತ್ರವನ್ನು ಸರಗಳ್ಳರು ಅಪಹರಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತ ಪಡಿಸಿದ ಅವರು, ಪೊಲೀಸರಿಗೆ ಗನ್ ನೀಡಿರುವುದು ಅಪರಾಧಿಗಳನ್ನು ಶಿಕ್ಷಿಸಲು ಹೊರತು ಆಭರಣದಂತೆ ಇಟ್ಟುಕೊಳ್ಳುವುದಕ್ಕಲ್ಲ ಎಂದು ಹೇಳಿದ್ದಾರೆ.
ಬಾರ್, ರೆಸ್ಟೋರೆಂಟ್‌ಗಳನ್ನು ನಿಗದಿತ ಸಮಯದೊಳಗೆ ಬಾಗಿಲು ಮುಚ್ಚಿಸಬೇಕು. ವಿದೇಶಿ ಪ್ರಜೆಗಳ ಉಪಟಳಕ್ಕೆ ಕಡಿವಾಣ ಹಾಕಬೇಕು. ಕದ್ದ ಮಾಲುಗಳನ್ನು ಖರೀದಿ ಮಾಡುವವರ ವಿರುದ್ಧವೂ ಪ್ರಕರಣ ದಾಖಲಿಸಲು ನಿರ್ದೇಶನ ನೀಡಿದ್ದೇನೆ. ರೌಡಿಗಳು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬುದನ್ನು ಕೇಳಲು ನಾನು ಬಯಸುವುದಿಲ್ಲ, ಇಂಥ ಕ್ರಿಮಿನಲ್ ಗಳನ್ನು ಮಟ್ಟ ಹಾಕುವ ಪೊಲೀಸರ ಬೆನ್ನಿನ ಹಿಂದೆ ನಾನು ಇರುತ್ತೇನೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದಿಂದ ಬಂದಿರುವ ಸರಗಳ್ಳ ‘ಬವೇರಿಯಾ ಗ್ಯಾಂಗ್’ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಅವರನ್ನು ವಾಪಸ್ ಊರಿಗೆ ಹೋಗಲು ಬಿಡದೆ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗುವುದು ಎಂದೂ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT