ರಾಮಲಿಂಗಾರೆಡ್ಡಿ 
ರಾಜ್ಯ

ರೌಡಿಗಳು, ಅತ್ಯಾಚಾರಿಗಳನ್ನು ಮುಲಾಜಿಲ್ಲದೇ ಶೂಟ್ ಮಾಡಿ: ರಾಮಲಿಂಗಾರೆಡ್ಡಿ

ರೌಡಿಗಳು, ಸರಗಳ್ಳರು, ಹಾಗೂ ಅತ್ಯಾಚಾರಿಗಳನ್ನು ಮುಲಾಜಿಲ್ಲದೇ ಶೂಟ್ ಮಾಡುವಂತೆ ಪೊಲೀಸರಿಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ....

ಬೆಂಗಳೂರು: ರೌಡಿಗಳು, ಸರಗಳ್ಳರು, ಹಾಗೂ ಅತ್ಯಾಚಾರಿಗಳನ್ನು ಮುಲಾಜಿಲ್ಲದೇ ಶೂಟ್ ಮಾಡುವಂತೆ  ಗೃಹ ಸಚಿವ ರಾಮಲಿಂಗಾ ರೆಡ್ಡಿ ಪೊಲೀಸರಿಗೆ ಸ್ಪಷ್ಟ  ಸಂದೇಶ ರವಾನಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ರೌಡಿಗಳು ಪೊಲೀಸರ ಮೇಲೆ ನಡೆಸಿದ ದಾಳಿ ಹಾಗೂ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿಯ ಮಂಗಳ ಸೂತ್ರವನ್ನು ಸರಗಳ್ಳರು ಅಪಹರಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತ ಪಡಿಸಿದ ಅವರು, ಪೊಲೀಸರಿಗೆ ಗನ್ ನೀಡಿರುವುದು ಅಪರಾಧಿಗಳನ್ನು ಶಿಕ್ಷಿಸಲು ಹೊರತು ಆಭರಣದಂತೆ ಇಟ್ಟುಕೊಳ್ಳುವುದಕ್ಕಲ್ಲ ಎಂದು ಹೇಳಿದ್ದಾರೆ.
ಬಾರ್, ರೆಸ್ಟೋರೆಂಟ್‌ಗಳನ್ನು ನಿಗದಿತ ಸಮಯದೊಳಗೆ ಬಾಗಿಲು ಮುಚ್ಚಿಸಬೇಕು. ವಿದೇಶಿ ಪ್ರಜೆಗಳ ಉಪಟಳಕ್ಕೆ ಕಡಿವಾಣ ಹಾಕಬೇಕು. ಕದ್ದ ಮಾಲುಗಳನ್ನು ಖರೀದಿ ಮಾಡುವವರ ವಿರುದ್ಧವೂ ಪ್ರಕರಣ ದಾಖಲಿಸಲು ನಿರ್ದೇಶನ ನೀಡಿದ್ದೇನೆ. ರೌಡಿಗಳು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬುದನ್ನು ಕೇಳಲು ನಾನು ಬಯಸುವುದಿಲ್ಲ, ಇಂಥ ಕ್ರಿಮಿನಲ್ ಗಳನ್ನು ಮಟ್ಟ ಹಾಕುವ ಪೊಲೀಸರ ಬೆನ್ನಿನ ಹಿಂದೆ ನಾನು ಇರುತ್ತೇನೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದಿಂದ ಬಂದಿರುವ ಸರಗಳ್ಳ ‘ಬವೇರಿಯಾ ಗ್ಯಾಂಗ್’ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಅವರನ್ನು ವಾಪಸ್ ಊರಿಗೆ ಹೋಗಲು ಬಿಡದೆ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗುವುದು ಎಂದೂ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT