ಬೆಂಗಳೂರು: ಬಾರ್ ನಲ್ಲಿ ಬಿಲ್ ಪಾವತಿಸುವ ಸಂಬಂಧ ಸ್ನೇಹಿತರ ಜಗಳ ಕೊಲೆಯಲ್ಲಿ ಅಂತ್ಯ 
ರಾಜ್ಯ

ಬೆಂಗಳೂರು: ಬಾರ್ ನಲ್ಲಿ ಬಿಲ್ ಪಾವತಿಸುವ ಸಂಬಂಧ ಸ್ನೇಹಿತರ ಜಗಳ ಕೊಲೆಯಲ್ಲಿ ಅಂತ್ಯ

ಬಾರ್ ಒಂದರಲ್ಲಿ ಮದ್ಯ ಸೇವನೆ ಮಾಡಿ ಬಿಲ್ ಪಾವತಿಸುವ ಕ್ಷುಲ್ಲಕ ವಿಚಾರದಲ್ಲಿ ಪ್ರಾರಂಭವಾದ ಜಗಳ ಕೊಲೆಯಲ್ಲಿ ಮುಕ್ತಾಯ ಕಂಡಿದೆ.

ಬೆಂಗಳೂರು: ಬಾರ್ ಒಂದರಲ್ಲಿ ಮದ್ಯ ಸೇವನೆ ಮಾಡಿ ಬಿಲ್ ಪಾವತಿಸುವ ಕ್ಷುಲ್ಲಕ ವಿಚಾರದಲ್ಲಿ ಪ್ರಾರಂಭವಾದ ಜಗಳ ಕೊಲೆಯಲ್ಲಿ ಮುಕ್ತಾಯ ಕಂಡಿದೆ. ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಬಾರ್ ಒಂದರಲ್ಲಿ ಗುರುವಾರ ಬೆಳಿಗ್ಗೆ ನಡೆದ ಘಟನೆಯಲ್ಲಿ ದಿನಗೂಲಿ ನೌಕರನೊಬ್ಬನನ್ನು ಅವನ ಸ್ನೇಹಿತನೇ ಹತ್ಯೆ ಮಾಡಿದ್ದಾನೆ.
ಭರತ್ ನಗರ ನಿವಾಸಿ ಅನಿಲ್ ಎಸ್.(24) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಈತ ಅದೇ ಪ್ರದೇಶದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಪೇಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಇನ್ನು ಆರೋಪಿಯನ್ನು ಶಿವಕುಮಾರ್ ಎಂದು ಪತ್ತೆ ಮಾಡಲಾಗಿದ್ದು ಈತ ಸಹ ಅದೇ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ. ಈತ ಶೇಶಾದ್ರಿಪುರಂ ನಿವಾಸಿಯಾಗಿದ್ದ ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ.
ಬೆಳಿಗ್ಗೆ 10 ಗಂಟೆ ಸುಮಾರಿಗೆ ನಗರದ ನಾರಾಯಣ ಪಿಳ್ಳೈ ರಸ್ತೆಯ ಬಾರ್ ಒಂದರಲ್ಲಿ ಮದ್ಯ ಸೇವನೆಯಲ್ಲಿ ತೊಡಗಿದ್ದ ಗೆಳೆಯರು ಬಿಲ್ ಪಾವತಿ ವಿಚಾರವಾಗಿ ಜಗಳ ಆಡಿದ್ದಾರೆ. ಜಗಳ ತೀವ್ರಗೊಂಡಿದೆ. ಶಿವಕುಮಾರ್ ಹಾಗೂ ಅನಿಲ್ ಇಬ್ಬರೂ ಯಾರು ಬಿಲ್ ಪಾವತಿಸಬೇಕೆನ್ನುವುದನ್ನು ತೀರ್ಮಾನಿಸದೆ ’ನೀನು, ನೀನು’ ಎಂದು ಕಾದಾಡಿದ್ದಾರೆ.
ಇದಾಗಿ ಶಿವಕುಮಾರ್, ಅನಿಲ್ ಗೆ ಬಿಲ್ ಪಾವತಿಸಲು ಒತ್ತಾಯಿಸಿದ್ದಾನೆ. ಆಗ ಅನಿಲ್ ನಿರಾಕರಿಸಿದ್ದು ಉದ್ರೇಕಗೊಂಡ ಶಿವಕುಮಾರ್ ಅವನನ್ನು ಬಾರ್ ನಿಂದ ಹೊರಗೆಳೆದು ತಂದು ರಸ್ತೆಯಲ್ಲಿ ಬಿದ್ದ ಕಲ್ಲೊಂದನ್ನು ಎತ್ತಿ ಅನಿಲ್ ತಲೆಗೆ ಹೊಡೆದಿದ್ದಾನೆ. ಕಲ್ಲಿನ ಏಟಿನಿಂದ ಗಂಭೀರವಾಗಿ ಗಾಯಗೊಂಡ ಅನಿಲ್ ತಲೆಯಲ್ಲಿ ರಕ್ತಸ್ರಾವವಾಗಿ ಪ್ರಜ್ಞೆ ಕಳೆದುಕೊಂಡಿದ್ದಾನೆ. ಇದರ ಬಳಿಕ ಶಿವಕುಮಾರ್ ಸ್ಥಳದಿಂದ ಪರಾರಿಯಾಗಿದ್ದ ಎಂದು ಪೋಲೀಸರು ಹೇಳಿದರು.
ಇದನ್ನು ಕಂಡ ಬಾರ್ ಸಿಬ್ಬಂದಿ ಕಮರ್ಷಿಯಲ್ ಸ್ಟ್ರೀಟ್ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೋಲೀಸರು ಗಂಬೀರವಾಗಿ ಗಾಯಗೊಂಡ ಅನಿಲ್ ನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ರಾಥಮಿಕ ತನಿಖೆ ವೇಳೆ ಶಿವಕುಮಾರ್ ಶೇಶಾದ್ರಿಪುರಂ ನಿವಾಸಿ ಎಂದು ತಿಳಿದ ಪೋಲೀಸರು ಶೇಶಾದ್ರಿಪುರಂ ಪೋಲೀಸರಿಗೆ ಮಾಹಿತಿ ತಿಳಿಸಿದರು. ಅಲ್ಲಿಂದ ಶೇಶಾದ್ರಿಪುರಂಪೋಲೀಸರು ಮನೆಯಲ್ಲಿ ಮಲಗಿದ್ದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ’ಜಗಳದ ವೇಳೆ ನಾನು ಹಲ್ಲೆ ನಡೆಸಿದ್ದು ನಿಜ, ಇದು ಅನಿಲ್ ಸಾವಿಗೆ ಕಾರಣವಾಗುವುದೆಂದು ತಿಳಿದಿರಲಿಲ್ಲ’ ಎಂದು ಆರೋಪಿ ಪೋಲೀಸರಿಗೆ ಮಾಹಿತಿ ನೀಡಿದ್ದಾನೆ.
ಇದೀಗ ಶಿವಕುಮಾರ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT