ಬೆಂಗಳೂರು: ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ. ಕರ್ನಾಟಕದಲ್ಲಿ ರೈಲ್ವೆ ಇಲಾಖೆ ನಡೆಸಿರುವ ಅಭಿವೃದ್ದಿ ಬಗೆಗೆ ಅವರು ವಿವರಿಸಿದ್ದಾರೆ.
ಕರ್ನಾಟಕದಲ್ಲಿ ರೈಲ್ವೆ ಅಭಿವೃದ್ದಿ ಎನ್ನುವ ಗ್ರಾಫ್ ಚಿತ್ರದ ಜತೆಗೆ ಸಚಿವರು ಟ್ವೀಟ್ ಮಾಡಿದ್ದು "ಕೇಂದ್ರ ಸರ್ಕಾರವು ಕಳೆದ ಮೂರು ವರ್ಷಗಳಲ್ಲಿ ರೇಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿದ್ದು, ರೇಲುಗಳ ವೇಗ ವರ್ಧನೆಗೆ ಹಾಗೂ ತಡೆರಹಿತ ಮತ್ತು ಸುರಕ್ಷಿತ ರಸ್ತೆ ಪ್ರಯಾಣಕ್ಕೆ ಸಹಾಯ ಮಾಡಿದೆ." ಎಂದಿದ್ದಾರೆ.
2004ರಿಂದ 2014ರ ಅವಧಿಯಲ್ಲಿ ಕರ್ನಾಟಕದಲ್ಲಿ ರೈಲ್ವೆ ಪ್ರಗತಿ, 2014ರಿಂದ 2017ರವರೆಗೆ ಮೋದಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದಲ್ಲಿ ರೈಲ್ವೆ ಕಾಮಗಾರಿಗಳ ಪ್ರಗತಿಯ ಕುರಿತು ಸಚಿವ ಗೋಯಲ್ ವಿವರಿಸಿದ್ದಾರೆ.
ಪಿಯೂಶ್ ಗೋಯಲ್ ಈ ಹಿಂದೆ ಸಹ ಕನ್ನಡದಲ್ಲಿ ಟ್ವೀಟ್ ಮಾಡಿ ಕನ್ನಡ ಅಭಿಮಾನವನ್ನು ಮೆರೆದಿದ್ದರು
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos