ಸಾಂದರ್ಭಿಕ ಚಿತ್ರ 
ರಾಜ್ಯ

ಬೇಸಿಗೆ ಶಿಬಿರದಲ್ಲಿ ಭಾಗವಹಿಸುವ ಸರ್ಕಾರಿ ಶಾಲೆ ಮಕ್ಕಳಿಗೆ ಈ ವರ್ಷ ಮಜ್ಜಿಗೆ ಪೂರೈಕೆ

ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸುವ ಬೇಸಿಗೆ ಶಿಬಿರದಲ್ಲಿ ಭಾಗವಹಿಸುವ ಸರ್ಕಾರಿ ಶಾಲೆಗಳಲ್ಲಿ ....

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸುವ ಬೇಸಿಗೆ ಶಿಬಿರದಲ್ಲಿ ಭಾಗವಹಿಸುವ ಸರ್ಕಾರಿ ಶಾಲೆಗಳಲ್ಲಿ ಅಧ್ಯಯನ ನಡೆಸುತ್ತಿರುವ ಮಕ್ಕಳಿಗೆ ಈ ವರ್ಷ ಮಜ್ಜಿಗೆ ನೀಡಲಾಗುತ್ತಿದೆ. ಬೇಸಿಗೆ ಶಿಬಿರದ ಎರಡನೇ ಆವೃತ್ತಿ 'ಸ್ವಲ್ಪ ಓದು-ಸ್ವಲ್ಪ ಮೋಜು'' ಕಾರ್ಯಕ್ರಮವನ್ನು 5 ಮತ್ತು 6ನೇ ತರಗತಿ ತೇರ್ಗಡೆ ಹೊಂದಿದ ಮಕ್ಕಳಿಗೆ ಈ ಶೈಕ್ಷಣಿಕ ವರ್ಷದಲ್ಲಿ ಆಯೋಜಿಸಲಾಗುತ್ತಿದೆ.

ರಾಜ್ಯಾದ್ಯಂತ 7,050 ಸರ್ಕಾರಿ ಶಾಲೆಗಳನ್ನು ಬೇಸಿಗೆ ಶಿಬಿರಗಳಿಗೆ ಗುರುತಿಸಲಾಗಿದ್ದು, ಪ್ರೌಢಶಾಲೆ ತರಗತಿಗಳಿಗೆ ಕಾಲಿಡುವ ಮುನ್ನ ಮಕ್ಕಳ ಮೂಲಜ್ಞಾನವನ್ನು ಸುಧಾರಿಸಲು ಈ ರೀತಿಯ ಬೇಸಿಗೆ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ.

ಈ ಬೇಸಿಗೆ ಶಿಬಿರಕ್ಕೆ ಆಯ್ಕೆ ಮಾಡಿಕೊಂಡಿರುವ ಬಹುತೇಕ ಶಾಲೆಗಳು ಬರಗಾಲಪೀಡಿತ ತಾಲ್ಲೂಕುಗಳಲ್ಲಿವೆ. ಇಲ್ಲಿ ಶಿಬಿರಗಳಲ್ಲಿ ಭಾಗವಹಿಸುವ ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳದಿದ್ದರೆ ಅವರು ಶಿಬಿರಗಳಿಗೆ ಬರುವುದಿಲ್ಲ ಎನ್ನುತ್ತಾರೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್.

ಬೇಸಿಗೆಯಲ್ಲಿ ಹೆಚ್ಚಾಗುವ ತಾಪಮಾನ ಮಕ್ಕಳಿಗೆ ಬಿಸಿಯೂಟ ಮಾತ್ರವಲ್ಲದೆ ಮಧ್ಯಾಹ್ನದ ನಂತರ ಮಜ್ಜಿಗೆ ಒದಗಿಸಲಿದ್ದೇವೆ. ಮಜ್ಜಿಗೆ ಪೂರೈಸಲು ನಾವು ಕರ್ನಾಟಕ ಹಾಲು ಒಕ್ಕೂಟದ ಜೊತೆ ಮಾತುಕತೆ ನಡೆಸುತ್ತಿದ್ದೇವೆ. ಬೇಸಿಗೆ ಶಿಬಿರಗಳಲ್ಲಿ ಭಾಗವಹಿಸುವ ಮಕ್ಕಳಿಗೆ ಶುದ್ಧವಾದ ಕುಡಿಯುವ ನೀರು ಒದಗಿಸುವುದು ಕೂಡ ಮುಖ್ಯವಾಗಿರುತ್ತದೆ ಎನ್ನುತ್ತಾರೆ ಸಚಿವ ಸೇಠ್.

ಸ್ವಲ್ಪ ಓದು-ಸ್ವಲ್ಪ ಮೋಜು 5 ವಾರಗಳ ಉಚಿತ ಬೇಸಿಗೆ ಶಿಬಿರವಾಗಿದ್ದು ಮಕ್ಕಳ ಕೌಶಲ್ಯ, ಗಣಿತ ಮತ್ತು ವಿಜ್ಞಾನ ವಿಷಯಗಳ ಕೌಶಲ್ಯಗಳನ್ನು ಸುಧಾರಿಸುವುದಾಗಿದೆ.

ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಸರಳ ಗಣಿತ ಮತ್ತು ಇಂಗ್ಲಿಷ್ ನಲ್ಲಿ ಸರಳ ವಾಕ್ಯಗಳನ್ನು ಓದುವುದಕ್ಕೆ ಕಷ್ಟವಾಗುತ್ತದೆ ಎಂದು ವಾರ್ಷಿಕ ಶಿಕ್ಷಣ ವರದಿಯಿಂದ ತಿಳಿದುಬಂದಿದೆ. ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಸರಿಯಾದ ಶಿಕ್ಷಣ ಸಿಗದಿದ್ದರೆ ಮುಂದೆ ಕಷ್ಟವಾಗುತ್ತದೆ ಎಂಬ ಉದ್ದೇಶದಿಂದ ಈ ಬೇಸಿಗೆ ಶಿಬಿರ ಆಯೋಜಿಸಲಾಗುತ್ತಿದೆ ಎಂದು ತನ್ವೀರ್ ಸೇಠ್ ತಿಳಿಸಿದರು.

ತಾಲ್ಲೂಕು ಮಟ್ಟದಲ್ಲಿ ಪೋಷಕರ ಮನವೊಲಿಸಿ ಮಕ್ಕಳನ್ನು ಬೇಸಿಗೆ ಶಿಬಿರಕ್ಕೆ ಕಳುಹಿಸುವಂತೆ ಮನವೊಲಿಸಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸುತ್ತಾರೆ. ಈ ಮಧ್ಯೆ ಪ್ರತಿವರ್ಷದಂತೆ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಈ ವರ್ಷ ಬೇಸಿಗೆ ರಜೆಗಳಲ್ಲಿ ಕೂಡ ವಿಸ್ತರಿಸಲಾಗುವುದು. ಅದನ್ನು ಸದ್ಯದಲ್ಲಿಯೇ ಘೋಷಣೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT