ಸಾಂಗ್ಲಿಯಾನ-ಡಿ ರೂಪಾ-ಆಶಾದೇವಿ 
ರಾಜ್ಯ

ನಿಭರ್ಯಾ ತಾಯಿಯ ಅಂದ ಚೆಂದ ವರ್ಣಿಸಿ ವಿವಾದಕ್ಕೀಡಾದ ಸಾಂಗ್ಲಿಯಾನ

ದೆಹಲಿಯಲ್ಲಿ ಕಾಮುಕರಿಂದ ಭೀಕರವಾಗಿ ಅತ್ಯಾಚಾರಕ್ಕೀಡಾಗಿ, ಅಮಾನುಷವಾಗಿ ಕೊಲೆಗೀಡಾದ ನಿರ್ಭಯಾ ಮತ್ತು ಆಕೆಯ ತಾಯಿ ಚೆಂದವನ್ನು ವರ್ಣಿಸಿ...

ಬೆಂಗಳೂರು: ದೆಹಲಿಯಲ್ಲಿ ಕಾಮುಕರಿಂದ ಭೀಕರವಾಗಿ ಅತ್ಯಾಚಾರಕ್ಕೀಡಾಗಿ, ಅಮಾನುಷವಾಗಿ ಕೊಲೆಗೀಡಾದ ನಿರ್ಭಯಾ ಮತ್ತು ಆಕೆಯ ತಾಯಿ ಚೆಂದವನ್ನು ವರ್ಣಿಸಿ ನಿವೃತ್ತ ಪೊಲೀಸ್ ಅಧಿಕಾರಿ ಎಚ್ ಟಿ ಸಾಂಗ್ಲಿಯಾನ ವಿವಾದಕ್ಕೀಡಾಗಿದ್ದಾರೆ. 
ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ್ದ ಮಹಿಳಾ ಅಧಿಕಾರಿಗಳ ಸನ್ಮಾನ ಸಮಾರಂಭದಲ್ಲಿ ನಿರ್ಭಯಾ ತಾಯಿ ಕೂಡ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಸಾಂಗ್ಲಿಯಾನ ಅವರು ನಿರ್ಭಯಾ ತಾಯಿ ಇಲ್ಲಿಗೆ ಬಂದಿದ್ದು. ನಮ್ಮ ಜತೆ ಮಾತನಾಡಿದ್ದು ತುಂಬಾ ಸಂತಸ ತಂದಿದೆ.  ನಿರ್ಭಯ ತಾಯಿ ಇಷ್ಟು ಚೆನ್ನಾಗಿದ್ದರೆ, ಇನ್ನು ನಿರ್ಭಯಾ ಇನ್ನೆಷ್ಟು ಚೆಂದ ಇರಬೇಕು ಎಂದು ಹೇಳಿದ್ದಾರೆ. 
ಇದೇ ವೇಳೆ ಯಾರಾದರೂ ದೌರ್ಜನ್ಯ ಮಾಡಲ ಬಂದರೆ ಅವರು ನಿಮಗಿಂತ ಹೆಚ್ಚು ಶಕ್ತಿಶಾಲಿಯಾಗಿದ್ದರೆ. ಸುಮ್ಮನೆ ಅವರಿಗೆ ಶರಣಾಗುವುದು ಒಳ್ಳೆಯದ್ದು ಆಗ ಕೊಲೆಯಾಗುವುದನ್ನಾದರೂ ತಪ್ಪಿಸಬಹುದು ಎಂದು ಹೇಳಿದ್ದರು. 
ತಮ್ಮ ಹೇಳಿಕೆಯನ್ನು ಸಮರ್ಥಿಕೊಂಡಿರುವ ಸಾಂಗ್ಲಿಯಾನ ಯಾವುದೇ ಕೆಟ್ಟ ಉದ್ದೇಶದಿಂದ ಈ ರೀತಿ ಹೇಳಲಿಲ್ಲ. ಯಾರಾದರೂ ನನ್ನ ಹತ್ತಿರ ಬಂದು ನೀವು ಎಷ್ಟು ಚೆನ್ನಾಗಿದ್ದೀರಾ. ಇನ್ನು 40 ವರ್ಷದ ವ್ಯಕ್ತಿಯಂತೆ ಕಾಣಿಸುತ್ತೀರಾ ಎಂದು ಹೇಳಿದರೆ ನನಗೆ ಸಂತೋಷವಾಗತ್ತದೆ. ಅದೇ ಅರ್ಥದಲ್ಲಿ ನಾನು ಅವರಿಗೂ ಹೇಳಿದ್ದು ಒಬ್ಬ ವ್ಯಕ್ತಿಯ ಮೆಚ್ಚುಗೆ ವ್ಯಕ್ತಪಡಿಸುವುದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT