ಐಐಎಂಬಿ ಘಟಿಕೋತ್ಸವ, 593 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ 
ರಾಜ್ಯ

ಐಐಎಂಬಿ ಘಟಿಕೋತ್ಸವ, 593 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ

ಇಂಡಿಯನ್‌ ಇನ್‌ಸ್ಟಿಟ್ಯೂ­ಟ್ ಆಫ್‌ ಮ್ಯಾನೇಜ್‌ಮೆಂಟ್‌ನ (ಐಐಎಂ), ಬೆಂಗಳೂರಿನ 43ನೇ ಘಟಿಕೋತ್ಸವದ ಶನಿವಾರ (ಮಾ. 17) ಆಯೋಜನೆಗೊಂಡಿತ್ತು

ಬೆಂಗಳೂರು: ಇಂಡಿಯನ್‌ ಇನ್‌ಸ್ಟಿಟ್ಯೂ­ಟ್ ಆಫ್‌ ಮ್ಯಾನೇಜ್‌ಮೆಂಟ್‌ನ (ಐಐಎಂ), ಬೆಂಗಳೂರಿನ 43ನೇ ಘಟಿಕೋತ್ಸವದ ಶನಿವಾರ (ಮಾ. 17) ಆಯೋಜನೆಗೊಂಡಿತ್ತು. ಈ ಸಂದರ್ಭದಲ್ಲಿ ಒಟ್ಟು 593 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.
ಪದವೀಧರರಲ್ಲಿ ಒಟ್ಟು ಎಂಟು ಮಂದಿ ಚಿನ್ನದ ಪದಕ ಗಳಿಸಿದ್ದಾರೆ. ಪಿರಮಲ್‌ ಸಮೂಹದ ಅಧ್ಯಕ್ಷ ಅಜಯ್‌ ಪಿರಮಲ್‌ ಅವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ಪ್ರಧಾನ ಮಾಡಿದರು. 
ಐಐಅಎಂಬಿ ನಿರ್ದೇಶಕ  ಜಿ. ರಘುರಾಮ್ ಮಾತನಾಡಿ "ಯುವಕರಲ್ಲಿ ಮೊದಲು ಏನನ್ನಾದರೂ ಸಾಧಿಸುವ ಆಳವಾದ ಬಯಕೆ ಇರಬೇಕು. ಹಾಗೇನಾದರೂ ಇದ್ದಲ್ಲಿ ಅದು ನಿಮ್ಮನ್ನು ಆ ನಿಟ್ಟಿನಲ್ಲಿ ತೊಡಗಿಸಿಕೊಲ್ಳಲು ಪ್ರಚೋದನೆ ನೀಡಿ ನಿಮ್ಮನ್ನು ಮುಂದುವರಿಯುವಂತೆ ಮಾಡಲಿದೆ. ಹಾಗೆ ನಿಮ್ಮ ಕನಸುಗಳನ್ನು ಅನುಸರಿಸಿ ಸಾಧಿಸಿರಿ. ಸಮಾಜಕ್ಕೆ ಅದು ದೊಡ್ಡ ಕೊಡುಗೆಯನ್ನೇ ನೀಡಬಹುದು. " ಎಂದಿದ್ದಾರೆ.
ಕಳೆದ ವರ್ಷ ಐಐಅಎಂಬಿ ಒಟ್ಟು ನಾಲ್ಕು ಅದ್ಯಯನ ಕೇಂದ್ರಗಳನ್ನು ತೆರೆದಿದೆ. ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಕಮ್ಯುನಿಕೇಷನ್, ಭಾರತ-ಜಪಾನ್ ಸ್ಟಡಿ ಸೆಂಟರ್, ಇಸ್ರೇಲ್ ಸೆಂಟರ್ ಮತ್ತು ಟರ್ ಫಾರ್ ಟೀಚಿಂಗ್ ಅಂಡ್ ಲರ್ನಿಂಗ್.ಗಳು ಇದರಲ್ಲಿ ಸೇರಿದೆ ಎಂದು ಅವರು ಹೇಳಿದ್ದಾರೆ.
ಸಮಿತಿಯ ಸದಸ್ಯರಾದ ಎನ್.ಎಸ್. ರಾಘವನ್ ಮಾತನಾಡಿ"ಐಐಎಂ-ಬಿ ನಲ್ಲಿ ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳಲ್ಲಿ (ಎಕ್ಸಿಕ್ಯುಟಿವ್ ಪೋಸ್ಟ್ ಗ್ರಾಜುಯೇಟ್ ಪ್ರೋಗ್ರಾಂ), ನಲ್ಲಿ ವ್ಯಾಸಂಗ ಮಾಡುತ್ತಿರುವವರಲ್ಲಿ  30% ರಷ್ಟು ಮಹಿಳೆಯರಿದ್ದಾರೆ. ಇದು ನಮಗೆ ಸಂತಸದ ಸಂಗತಿಯಾಗಿದ್ದು ಮುಂಬರುವ ವರ್ಷಗಳಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ ಎಂದು ನಾವು ಭಾವಿಸುತ್ತೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT