ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿಯಲ್ಲಿ ವೀರಶೈವ, ಲಿಂಗಾಯತ ಬಣದ ನಡುವೆ ಮಾರಾಮಾರಿ

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ.....

ಕಲಬುರಗಿ: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಪ್ರತ್ಯೇಕ ಧರ್ಮದ ಪರ, ವಿರೋಧವಿರುವ ಲಿಂಗಾಯತ ಮತ್ತು ವೀರಶೈವ ಬಣಗಳ ನಡುವೆ ಸೋಮವಾರ ಮಾರಾಮಾರಿ ನಡೆದಿದೆ.
ಪ್ರತ್ಯೇಕ ಧರ್ಮಕ್ಕೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಇಂದು ಕಲಬುರಗಿಯ ವಲ್ಲಭಭಾಯ್ ಪಟೇಲ್ ಸರ್ಕಲ್ ನಲ್ಲಿ ಲಿಂಗಾಯತ ಬಣದ ಬೆಂಬಲಿಗರು ಸಂಭ್ರಮ ಆಚರಿಸುತ್ತಿದ್ದರು. ಇದೇ ವೇಳೆ ವೀರಶೈವ ಬಣದವರು ಪ್ರತಿಭಟನೆ ನಡೆಸುತ್ತಿದ್ದರು. 
ಈ ವೇಳೆ ಎರಡೂ ಬಣದ ಬೆಂಬಲಿಗರ ನಡುವೆ ಪರಸ್ಪರ ಮಾರಾಮಾರಿ ನಡೆದಿದ್ದು, ಲಿಂಗಾಯತ ಮುಖಂಡರು ವೀರಶೈವ ಮುಖಂಡ ಎಂಎಸ್ ಪಾಟೀಲ್ ಅವರನ್ನು ಥಳಿಸಿದ್ದಾರೆ.
ಪ್ರತ್ಯೇಕ ಧರ್ಮಕ್ಕೆ ಶಿಫಾರಸು ಮಾಡಿದ್ದನ್ನು ವಿರೋಧಿಸಿ ವೀರಶೈವ ಬಣದವರು ಚಪ್ಪಲಿ ಹಿಡಿದು ಪ್ರತಿಭಟನೆ ನಡೆಸಿದರು. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾವಚಿತ್ರಕ್ಕೆ ಬೆಂಕಿಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಲವೆಡೆ ವಿಜಯೋತ್ಸವ
ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಕೇಂದ್ರಕ್ಕೆ ಶಿಫಾರಸು ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಿಸಿ ಬಸವಾಭಿಮಾನಿಗಳು ವಿಜಯೋತ್ಸವ ಆಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT