ಕಲಬುರ್ಗಿ:ಜಾತ್ರೆಯ ವೇಳೆ ರಥ ಹರಿದು ಓರ್ವ ಸಾವು 
ರಾಜ್ಯ

ಕಲಬುರ್ಗಿ:ಜಾತ್ರೆಯ ವೇಳೆ ರಥ ಹರಿದು ಓರ್ವ ಸಾವು

ಕಲಬುರ್ಗಿಯ ಶಿವಲಿಂಗೇಶ್ವರ ಜಾತ್ರೆಯು ಭೀಕರ ದುರಂತವೊಂದಕ್ಕೆ ಸಾಕ್ಷಿಯಾಗಿದೆ.

ಕಲಬುರ್ಗಿ: ಕಲಬುರ್ಗಿಯ ಶಿವಲಿಂಗೇಶ್ವರ ಜಾತ್ರೆಯು ಭೀಕರ ದುರಂತವೊಂದಕ್ಕೆ ಸಾಕ್ಷಿಯಾಗಿದೆ. ಯುಗಾದಿ ಪ್ರಯುಕ್ತ ನಡೆದಿದ್ದ ಸಂಭ್ರಮದ ಜಾತ್ರಾ ಮಹೋತ್ಸವದಲ್ಲಿ  ರಥದ ಚಕ್ರಕ್ಕೆ ಸಿಲುಕಿದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ.
ಕಲಬುರ್ಗಿ ಜಿಲ್ಲೆ ಶಹಬಾದ್ ತಾಲೂಕಿನ ದೇವನ ತೇಗನೂರು ಗ್ರಾಮದಲ್ಲಿ ಈ ದುರ್ಘಟನೆ ಸಂಬವಿಸಿದ್ದು ಮೃತ ದುರ್ದೈವಿಯನ್ನು ಕಿಶನ್ ಎಂದು ಗುರುತಿಸಲಾಗಿದೆ. ಜಾತ್ರೆಯ ವೇಳೆ ರಥ ಎಳೆಯುತ್ತಿರುವ ಸಮಯ  ಕಿಶನ್​ ಇದ್ದಕ್ಕಿದ್ದಂತೆ ಕೆಳಗೆ ಬಿದ್ದಿದ್ದಾರೆ. ಆ ವೇಳೆ ಮುಂದೆ ಸಾಗಿ ಬರುತ್ತಿದ್ದ ರಥದ ಗಾಲಿಗಳು ಅವರ ಮೇಲೆ ಹರಿದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರರು ಶಹಬಾದ್ ತಾಲೂಕಿನ ತರಿ ತಾಂಡಾದ ’ನಿವಾಸಿಯಾಗಿದ್ದರು. 
ಗದಗದಲ್ಲಿ ದುರಂತ
ಗದಗದ ರೋಣ ತಾಲೂಕಿನ ಗಾಡಗೋಳಿ ಗ್ರಾಮದಲ್ಲಿನಡೆಯುತ್ತಿದ್ದ ಜಾತ್ರೆಯಲ್ಲಿ ಸಹ ದುರಂತ ಸಂಭವಿಸಿದ್ದು ರಥ ಹರಿದ ಪರಿಣಾಮ ಓರ್ವ  ವ್ಯಕ್ತಿ ತನ್ನ ಕಾಲು ಕಳೆದುಕೊಂಡಿದ್ದಾರೆ. ರಥ ಎಳೆಯುವ ವೇಳೆ ನೂಕುನುಗ್ಗಲು ಉಂಟಾದ ಕಾರಣ ಮುದಿಯಪ್ಪ ಎನ್ನುವವರ ಮೇಲೆ ರಥ ಹರಿದು ಅವರ ಕಾಲು ಮುರಿದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT