ಕಲಬುರ್ಗಿ:ಜಾತ್ರೆಯ ವೇಳೆ ರಥ ಹರಿದು ಓರ್ವ ಸಾವು 
ರಾಜ್ಯ

ಕಲಬುರ್ಗಿ:ಜಾತ್ರೆಯ ವೇಳೆ ರಥ ಹರಿದು ಓರ್ವ ಸಾವು

ಕಲಬುರ್ಗಿಯ ಶಿವಲಿಂಗೇಶ್ವರ ಜಾತ್ರೆಯು ಭೀಕರ ದುರಂತವೊಂದಕ್ಕೆ ಸಾಕ್ಷಿಯಾಗಿದೆ.

ಕಲಬುರ್ಗಿ: ಕಲಬುರ್ಗಿಯ ಶಿವಲಿಂಗೇಶ್ವರ ಜಾತ್ರೆಯು ಭೀಕರ ದುರಂತವೊಂದಕ್ಕೆ ಸಾಕ್ಷಿಯಾಗಿದೆ. ಯುಗಾದಿ ಪ್ರಯುಕ್ತ ನಡೆದಿದ್ದ ಸಂಭ್ರಮದ ಜಾತ್ರಾ ಮಹೋತ್ಸವದಲ್ಲಿ  ರಥದ ಚಕ್ರಕ್ಕೆ ಸಿಲುಕಿದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ.
ಕಲಬುರ್ಗಿ ಜಿಲ್ಲೆ ಶಹಬಾದ್ ತಾಲೂಕಿನ ದೇವನ ತೇಗನೂರು ಗ್ರಾಮದಲ್ಲಿ ಈ ದುರ್ಘಟನೆ ಸಂಬವಿಸಿದ್ದು ಮೃತ ದುರ್ದೈವಿಯನ್ನು ಕಿಶನ್ ಎಂದು ಗುರುತಿಸಲಾಗಿದೆ. ಜಾತ್ರೆಯ ವೇಳೆ ರಥ ಎಳೆಯುತ್ತಿರುವ ಸಮಯ  ಕಿಶನ್​ ಇದ್ದಕ್ಕಿದ್ದಂತೆ ಕೆಳಗೆ ಬಿದ್ದಿದ್ದಾರೆ. ಆ ವೇಳೆ ಮುಂದೆ ಸಾಗಿ ಬರುತ್ತಿದ್ದ ರಥದ ಗಾಲಿಗಳು ಅವರ ಮೇಲೆ ಹರಿದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರರು ಶಹಬಾದ್ ತಾಲೂಕಿನ ತರಿ ತಾಂಡಾದ ’ನಿವಾಸಿಯಾಗಿದ್ದರು. 
ಗದಗದಲ್ಲಿ ದುರಂತ
ಗದಗದ ರೋಣ ತಾಲೂಕಿನ ಗಾಡಗೋಳಿ ಗ್ರಾಮದಲ್ಲಿನಡೆಯುತ್ತಿದ್ದ ಜಾತ್ರೆಯಲ್ಲಿ ಸಹ ದುರಂತ ಸಂಭವಿಸಿದ್ದು ರಥ ಹರಿದ ಪರಿಣಾಮ ಓರ್ವ  ವ್ಯಕ್ತಿ ತನ್ನ ಕಾಲು ಕಳೆದುಕೊಂಡಿದ್ದಾರೆ. ರಥ ಎಳೆಯುವ ವೇಳೆ ನೂಕುನುಗ್ಗಲು ಉಂಟಾದ ಕಾರಣ ಮುದಿಯಪ್ಪ ಎನ್ನುವವರ ಮೇಲೆ ರಥ ಹರಿದು ಅವರ ಕಾಲು ಮುರಿದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT