ಬಸವರಾಜ ರಾಯ ರೆಡ್ಡಿ 
ರಾಜ್ಯ

ಸರ್ಕಾರ ಅಧಿಕಾರಿಗಳನ್ನು 9 ದಿನಗಳಲ್ಲೇ ವರ್ಗಾವಣೆ ಮಾಡಬಹುದು: ಬಸವರಾಜ ರಾಯರೆಡ್ಡಿ

ಒಂದು ವೇಳೆ ಸರ್ಕಾರ ಬಯಸಿದರೇ ಒಂಬತ್ತು ದಿನಗಳೊಳಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಬಹುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ...

ಕೊಪ್ಪಳ: ಒಂದು ವೇಳೆ ಸರ್ಕಾರ ಬಯಸಿದರೇ ಒಂಬತ್ತು ದಿನಗಳೊಳಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಬಹುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಪದೇ ಪದೇ ವರ್ಗಾವಣೆ ಕುರಿತು ಎದ್ದಿದ್ದ ಚರ್ಚೆ ಸಂಬಂಧ ಪ್ರತಿಕ್ರಿಯಿಸಿರುವ ಅವರು ಸರ್ಕಾರ ಬಯಸಿದರೇ 9 ದಿನಗಳೊಳಗೆ ವರ್ಗಾವಣೆ ಮಾಡಬಹುದು, ಸರ್ಕಾರದ ಆದೇಶವನ್ನು  ಅಧಿಕಾರಿಗಳು ಒಪ್ಪಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಕೊಪ್ಪಳ ಡಿಸಿ ಅನೂಪ್ ಶೆಟ್ಟಿ  ಅವರ ವರ್ಗಾವಣೆಯನ್ನು ಸಿಎಟಿ ತಡೆ ಹಿಡಿದಿದೆ. ಅನೂಪ್ ಶೆಟ್ಟಿ ಅವರನ್ನು 9 ತಿಂಗಳ ಹಿಂದೆ ಕೊಪ್ಪಳಕ್ಕೆ ವರ್ಗಾವಣೆ ಮಾಡಲಾಗಿತ್ತು., ಮರಳು ಮತ್ತು ಲಿಕ್ಕರ್ ಮಾಫಿಯಾ ವಿರುದ್ದ ಅನೂಪ್ ಶೆಟ್ಟಿ ಭಾರೀ ಕೆಲಸ ಮಾಡಿದ್ದರು, ಈ ಸಂಬಂಧ ಸಚಿವರನ್ನು ಪ್ರಶ್ನಿಸಿದಾಗ, ಪೋಸ್ಟಿಂಗ್ ಆದ ಅವಧಿಯೊಳಗೂ ಅಧಿಕಾರಿಗಳನ್ನು ವರ್ಗಾವಣೆ ಮಾಡಬಹುದಾಗಿದೆ ಎಂದು ಹೇಳಿದ್ದಾರೆ.
ಮಾರ್ಚ್ 12 ರಂದು ಅನೂಪ್ ಶೆಟ್ಟಿ ಅವರನ್ನು  ಬೆಂಗಳೂರಿನ  ಗುಪ್ತಚರ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು. ಅವಧಿ ಪೂರ್ವ ವರ್ಗಾವಣೆಯನ್ನು ಸಿಎ
ಟಿ ತಡೆ ಹಿಡಿದಿತ್ತು.
ಸಿದ್ದರಾಮಯ್ಯ ಅವರದ್ದು ಬೇಜವಾಬ್ದಾರಿ ಸರ್ಕಾರ, ಪ್ರಾಮಾಣಿಕ  ಅಧಿಕಾರಿಗಳನ್ನು ಪದೇ ಪದೇ ವರ್ಗಾವಣೆ ಮಾಡುತ್ತಿದೆ ಎಂದು ಜೆಡಿಎಸ್ ಮತ್ತು ಬಿಜೆಪಿ ಆರೋಪಿಸಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT