ನೀರಾವರಿ ಸಚಿವ ಎಂ.ಬಿ ಪಾಟೀಲ್ 
ರಾಜ್ಯ

ಲಿಂಗಾಯತ ವಿಚಾರ: ಐತಿಹಾಸಿಕ ನಿರ್ಣಯ ಎಂದ ಸಚಿವ ಎಂಬಿ ಪಾಟೀಲ್

ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ನೀಡುವ ಕುರಿತಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು...

ಬೆಂಗಳೂರು; ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ನೀಡುವ ಕುರಿತಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಐತಿಹಾಸಿಕ ನಿರ್ಣಯ ಎಂದು ನೀರಾವರಿ ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ. 
ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ನೀಡುವ ಕುರಿತಂತೆ ಸಚಿವ ಸಂಪುಟದಲ್ಲಿ ಒಪ್ಪಿಗೆ ನಿಕ್ಕ ಬಳಿಕ ನಗರದ ಖಾಸಗಿ ಹೋಟೆಲ್ ನಲ್ಲಿ ಸಚಿವ ಎಂ.ಬಿ.ಪಾಟೀಲ್, ವಿನಯ್ ಕುಲಕರ್ಣಿಯವರು ಜಂಟಿ ಪತ್ರಿಕಾಗೋಷ್ಟಿ ನಡೆಸಿದರು. 
ಈ ವೇಳೆ ಮಾತನಾಡಿದ ಸಚಿವರಿಬ್ಬರೂ ಸರ್ಕಾರದ ನಿರ್ಧಾರ ಐತಿಹಾಸಿಕ ನಿರ್ಣಯ ಎಂದು ತಿಳಿಸಿದರು.
ಸಚಿವ ಸಂಪುಟ ತೀರ್ಮಾನವು ರಾಜ್ಯದ ಇತಿಹಾಸದಲ್ಲಿಯೇ ಸ್ಮರಣೀಯ, ಐತಿಹಾಸಿಕ ದಿನ. ಬಸವಣ್ಣ ಹಾಗೂ ಶರಣರು ಮಾನವ ಧರ್ಮ ಹುಟ್ಟು ಹಾಕಿ, ಸಾಮಾಜಿಕ ಅನ್ಯಾಯದ ವಿರುದ್ಧ ಹೋರಾಟ ನಡೆಸಿ ಪ್ರತಿಯೊಬ್ಬರೂ ಸಮಾನರು ಎಂದು ಸಾರಿದ್ದರು. 900 ವರ್ಷಗಳ ಬಳಿಕ ಮತ್ತೊಮ್ಮೆ ನಮ್ಮ ಮೂಲ ಧರ್ಮಕ್ಕೆ ಮಾನ್ಯತೆ ಲಭಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು. 
ಅಲ್ಪಸಂಖ್ಯಾತರ ಕಾಯ್ದೆ ಸೆಕ್ಷನ್ 2ಡಿ ಅಡಿಯಲ್ಲಿ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಮಾಡಲು ಶಿಪಾರಸು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದಾರೆ. ಇಡೀ ಲಿಂಗಾಯತ ಸಮಾಜದ ಪರವಾಗಿ ಮುಖ್ಯಮಂತ್ರಿಗಳನ್ನು ಅಭಿನಂದಿಸಲಾಗುವುದು ಎಂದು ಹೇಳಿದರು. 
ನಾವು ಅಲ್ಪಸಂಖ್ಯಾತ ಮೀಸಲಾತಿಗಾಗಿ ಹೋರಾಟ ನಡೆಸಿಲ್ಲ. ಬದಜಲಿಗೆ ಬಸವ ಧರ್ಮ ಜಾಗತಿಕ ಧರ್ಮವಾಗಬೇಕು ಎಂಬ ನಮ್ಮ ಆಶಯದ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT