ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಶಿಫಾರಸು: ವೀರಶೈವ-ಲಿಂಗಾಯತ ಪಂಗಡಗಳ ನಡುವೆ ಘರ್ಷಣೆ 
ರಾಜ್ಯ

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಶಿಫಾರಸು: ವೀರಶೈವ-ಲಿಂಗಾಯತ ಪಂಗಡಗಳ ನಡುವೆ ಘರ್ಷಣೆ

ಪ್ರತ್ಯೇಕ ಲಿಂಗಾಯತ ಧರ್ಮ ಪರವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಬಗ್ಗೆ ಸೋಮವಾರ ರಾಜ್ಯ ಸಚಿವ ಸಂಪುಟ ತೀರ್ಮಾ ಕೈಗೊಳ್ಳುತ್ತಿದ್ದಂತೆಯೇ ರಾಜ್ಯದಾದ್ಯಂತ ಪರ ಹಾಗೂ ವಿರೋಘ ಹೇಳಿಕೆಗಳು ಕೇಳಿ ಬರಲು ಆರಂಭಿಸಿದ್ದವು. ಈ ನಡುವೆ ವಿಜಯೋತ್ಸವ, ಪ್ರತಿಭಟನೆಗಳೂ ಕೂಡ ನಡೆದವು...

ಕಲಬುರಗಿ: ಪ್ರತ್ಯೇಕ ಲಿಂಗಾಯತ ಧರ್ಮ ಪರವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಬಗ್ಗೆ ಸೋಮವಾರ ರಾಜ್ಯ ಸಚಿವ ಸಂಪುಟ ತೀರ್ಮಾ ಕೈಗೊಳ್ಳುತ್ತಿದ್ದಂತೆಯೇ ರಾಜ್ಯದಾದ್ಯಂತ ಪರ ಹಾಗೂ ವಿರೋಘ ಹೇಳಿಕೆಗಳು ಕೇಳಿ ಬರಲು ಆರಂಭಿಸಿದ್ದವು. ಈ ನಡುವೆ ವಿಜಯೋತ್ಸವ, ಪ್ರತಿಭಟನೆಗಳೂ ಕೂಡ ನಡೆದವು. 
ಇದೇ ವೇಳೆ ಪ್ರತಿಭಟನಾ ನಿರತ ವೀರಶೈವ ಹಾಗೂ ವಿಜಯೋತ್ಸವ ಆಚರಿಸುತ್ತಿದ್ದ ಲಿಂಗಾಯತ ಪಂಗಡಗಳ ನಡುವೆ ನಡುಬೀದಿಯಲ್ಲಿಯೇ ಪರಸ್ಪರ ಚಪ್ಪಲಿ ತೋರಿಸಿ ಹೊಡೆದಾಟ ನಡೆಸಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಿನ್ನೆ ಸಂಜೆ ನಡೆಯಿತು. 
ಪ್ರತ್ಯೇಕ ಧರ್ಮಕ್ಕೆ ರಾಜ್ಯ ಸರ್ಕಾರದ ಶಿಫಾರಸು ವಿರೋಧಿಸಿ ವೀರಸೈವ ಸ್ವಾಭಿಮಾನಿ ಬಳಗದವರು ನಗರದ ಪಟೇಲ್ ವೃತ್ತದಲ್ಲಿ ಹೋರಾಟಕ್ಕಿಳಿದಿದ್ದರು. ವೀರಶೈವ ಸ್ವಾಭಿಮಾನ ಬಳಗದ ಸದಸ್ಯರು ಸಿಎಂ ಸಿದ್ದರಾಮಯ್ಯ, ಸಚಿವ ಎಂ.ಬಿ ಪಾಟೀಲ್, ವಿನಯ್ ಕುಲಕರ್ಣಿ, ಸೇರಿದಂತೆ ಹಲವರ ಪ್ರತಿಕೃತಿಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. 
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಕ್ರಮ ಸ್ವಾಗತಿಸಿ ವಿಜಯೋತ್ಸವ ಆಚರಿಸುವ ಸಲುವಾಗಿ ಬಸವಾಭಿಮಾನಿ ಬಳಗದ ಸದಸ್ಯರು ಪಟೇಲ್ ವೃತ್ತಕ್ಕೆ ಆಗಮಿಸಿದರು. ಈ ಹಂತದಲ್ಲೇ ಬಸವಾಭಿಮಾನಿಗಳ ಗುಂಪಿನಿಂದ ಹಲವರು ಮುನ್ನಿಗ್ಗಿ ಬಂದಿ ವೀರಶೈವ ಸ್ವಾಭಿಮಾನ ಬಳಗದ ಮುಖಂಡ ಮಹಾದೇವಪ್ಪಗೌಡ ಪಾಟೀಲ್ ನರಿಬೋಳ್ ಸೇರಿದಂತೆ ಹಲವರ ಮೇಲೆ ಹಲ್ಲೆಗೆ ಮುಂದಾದರು. ಪರಸ್ಪರ ತಳ್ಳಾಟ, ಒಡೆದಾಡ ನಡೆದ ಘಟನೆಗಳೂ ಕೂಡ ನಡೆದವು. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಘು ಲಾಠಿ ಪ್ರಹಾರರ ನಡೆಸಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹಲವರನ್ನು ವಶಕ್ಕೆ ಪಡೆದುಕೊಂಡರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT