ದ್ವಿತೀಯ ಪಿಯು ಮೌಲ್ಯಮಾಪನ ಬಹಿಷ್ಕರಿಸಲಿರುವ ಪ್ರಾಧ್ಯಾಪಕರು 
ರಾಜ್ಯ

ದ್ವಿತೀಯ ಪಿಯು ಮೌಲ್ಯಮಾಪನ ಬಹಿಷ್ಕರಿಸಲಿರುವ ಪ್ರಾಧ್ಯಾಪಕರು

ಕೆಲವೇ ದಿನಗಳ ಹಿಂದೆ ಪೂರ್ಣಗೊಂಡ ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಅಡ್ಡಿ ಉಂಟಾಗಿದ್ದು, ಪ್ರಾಧ್ಯಾಪಕರು ಮೌಲ್ಯಮಾಪನವನ್ನು ಬಹಿಷ್ಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಕೆಲವೇ ದಿನಗಳ ಹಿಂದೆ ಪೂರ್ಣಗೊಂಡ ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಅಡ್ಡಿ ಉಂಟಾಗಿದ್ದು, ಪ್ರಾಧ್ಯಾಪಕರು ಮೌಲ್ಯಮಾಪನವನ್ನು ಬಹಿಷ್ಕರಿಸಲಿದ್ದಾರೆ ಎಂದು ತಿಳಿದುಬಂದಿದೆ. 
6 ನೇ ವೇತನ ಆಯೋಗದ ಶಿಫಾರಸ್ಸುಗಳಲ್ಲಿ ಉಪನ್ಯಾಸಕರ ವೇತನ ತಾರತಮ್ಯವನ್ನು ವಿರೋಧಿಸಿ, ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿರುವ ಉಪನ್ಯಾಸಕರ ಒಕ್ಕೂಟ ಮಾ.22 ರಿಂದ ಮೌಲ್ಯಮಾಪನವನ್ನು ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ. 
ಮಾ.22 ರಿಂದ ದ್ವಿತಿಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಬೇಕಿತ್ತು. ನಾವು ಪ್ರತಿಭಟನೆ ಮಾಡದೇ ಇದ್ದರೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವುದಿಲ್ಲ, ಪಿಯು ಕಾಲೇಜು ಉಪನ್ಯಾಸಕರಿಗೆ 53,100 ರೂವರೆಗೆ ವೇತನ ಹೆಚ್ಚಾಗಬೇಕು ಆದರೆ 6 ನೇ ವೇತನ ಆಯೋಗದ ವೇತನದ ಶಿಫಾರಸ್ಸಿನ ಪ್ರಕಾರ 43,000 ರೂ  ಗಳವರೆಗಷ್ಟೇ ವೆತನ ಹೆಚ್ಚಳ ಮಾಡಲಾಗಿದ್ದು, ಇದು ಪಿಯು ಉಪನ್ಯಾಸಕರ ಆಕ್ರೋಶಕ್ಕೆ ಕಾರಣವಾಗಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!