ಮೊಹಮ್ಮದ್ ನಲಪಾಡ್ 
ರಾಜ್ಯ

ಮೊಹಮ್ಮದ್ ನಲಪಾಡ್ ನ್ಯಾಯಾಂಗ ಬಂಧನ ಏಪ್ರಿಲ್ 4ರವರೆಗೆ ವಿಸ್ತರಣೆ

ವಿದ್ವತ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ನ್ಯಾಯಾಂಗ ಬಂಧನ ಅವಧಿಯನ್ನು ಏಪ್ರಿಲ್...

ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ನ್ಯಾಯಾಂಗ ಬಂಧನ ಅವಧಿಯನ್ನು ಏಪ್ರಿಲ್ 4ರವರೆಗೂ ವಿಸ್ತರಣೆ ಮಾಡಲಾಗಿದೆ.
ನಲಪಾಡ್ ನ್ಯಾಯಾಂಗ ಬಂಧನ ಇಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮೊಹಮ್ಮದ್ ನಲಪಾಡ್ ನನ್ನು ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಕಲಾಪಕ್ಕೆ ಹಾಜರುಪಡಿಸಿದ್ದರು. 
ಈ ವೇಳೆ ನಲಪಾಡ್ ಪರ, ಮತ್ತು ವಿದ್ವತ್ ಪರ ವಕೀಲರ ವಾದ ಆಲಿಸಿದ ನ್ಯಾಯಾಧೀಶರು ನಲಪಾಡ್ ನ್ಯಾಯಾಂಗ ಬಂಧನ ಅವಧಿಯನ್ನು 14 ದಿನಗಳ ಅಂದರೆ ಏಪ್ರಿಲ್ 4ರವರೆಗೂ ವಿಸ್ತರಣೆ ಮಾಡಿದ್ದಾರೆ. 
ಇದಕ್ಕೂ ಮೊದಲು ವಿದ್ವತ್ ಪರ ವಾದ ಮಂಡಿಸಿದ್ದ ವಕೀಲರು ನಲಪಾಡ್ ಜಾಮೀನು ಅರ್ಜಿ ವಿರೋಧ ವ್ಯಕ್ತಪಡಿಸಿದ್ದರು. ಅಂತೆಯೇ ನಲಪಾಡ್ ವಿರುದ್ಧ ಸಾಕ್ಷ್ಯ ನಾಶ ಆತಂಕ ವ್ಯಕ್ತಪಡಿಸಿದ್ದ ವಿದ್ವತ್ ಪರ ವಕೀಲರು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಹೇಳಿದ್ದರು.
ಕಳೆದ ಫೆಬ್ರವರಿ 17ರಂದು ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಯು ಬಿ ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಎಂಬ ಯುವಕನ ಮೇಲೆ ಹಲ್ಲೆ ಮಾಡಿದ್ದರು. ಈ ಸಂಬಂಧ ಎಲ್ಲಾ ಆರೋಪಿಗಳ ವಿರುದ್ಧ ಕೊಲೆ ಯತ್ನದ ಪ್ರರಕಣ ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT