ಸರ್ಕಾರಿ ಶಾಲೆಗಳಲ್ಲಿ ಪೋಷಕ-ಶಿಕ್ಷಕ ಸಭೆ ಕಡ್ದಾಯ, ಮುಂದಿನ ವರ್ಷದಿಂದ ಜಾರಿ 
ರಾಜ್ಯ

ಸರ್ಕಾರಿ ಶಾಲೆಗಳಲ್ಲಿ ಪೋಷಕ-ಶಿಕ್ಷಕ ಸಭೆ ಕಡ್ದಾಯ, ಮುಂದಿನ ವರ್ಷದಿಂದ ಜಾರಿ

: ರಾಜ್ಯ ಸರ್ಕಾರಿ ಶಾಲೆಗಳ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯದ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಇಲಾಖೆಯು ಮುಂದಿನ ಶೈಕ್ಷಣಿಕ ವರ್ಷದಿಂದ ಪೋಷಕ ಶಿಕ್ಷಕರ ಸಭೆಗಳನ್ನು (ಪಿಟಿಎಂ)........

ಬೆಂಗಳೂರು: ರಾಜ್ಯ ಸರ್ಕಾರಿ ಶಾಲೆಗಳ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯದ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಇಲಾಖೆಯು ಮುಂದಿನ ಶೈಕ್ಷಣಿಕ ವರ್ಷದಿಂದ ಪೋಷಕ ಶಿಕ್ಷಕರ ಸಭೆಗಳನ್ನು (ಪಿಟಿಎಂ) ಪರಿಚಯಿಸಲು ನಿರ್ಧರಿಸಿದೆ. ಖಾಸಗಿ ಶಾಲೆಗಳನ್ನು ಮಾದರಿಯಾಗಿರಿಸಿಕೊಂಡು ಈ ರೀತಿಯ ಪೋಷಕ ಶಿಕ್ಷಕರ ಸಭೆಗಳನ್ನು ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕದ್ಡಾಯಗೊಳಿಸಲು ಇಲಾಖೆ ತೀರ್ಮಾನಿಸಿದೆ. ಶಾಲಾ ಮುಖ್ಯೋಪಾದ್ಯಾಯರು, ಮುಖ್ಯೋಪಾದ್ಯಾಯಿನಿ ತಮ್ಮ ಶಾಲೆಯಲ್ಲಿ ಮೂರು ತಿಂಗಳಿಗೊಮ್ಮೆ ಇಂತಹಾ ಸಭೆ ನಡೆಸಬೇಕು ಎಂಡು ಇಲಾಖೆ ತಿಳಿಸಿದೆ.
"ಸಭೆಗಳಿಂದ ಪೋಷಕರಿಗೆ ತಮ್ಮ ಮಕ್ಕಳ ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳ ಕುರಿತು ಹೆಚ್ಚಿನ ಮಾಹಿತಿ ತಿಳಿಯಲು ಅವಕಾಶವಾಗಲಿದೆ" ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. 
"ನಾನು ಮುಂಬರುವ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ  ಪಿಟಿಎಂಗಳನ್ನು ಆಯೋಜಿಸುವುದನ್ನು ಕಡ್ಡಾಯಗೊಳಿಸಬೇಕೆಂದು ನಮ್ಮ ಇಲಾಖೆ ಅಧಿಕಾರಿಗಳಿಗೆ ಹೇಳಿದ್ದೇನೆ. ಇದರಿಂಡ ಪೋಷಕರ ಮತ್ತು ಶಿಕ್ಷಕರು ಮಗುವಿನ ಬೆಳವಣಿಗೆ ಕುರಿತು ತಿಳಿಯುವುದು ಸುಲಭವಾಗಲಿದೆ" ರಾಜ್ಯ ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಟ್ ಹೇಳಿದ್ದಾರೆ.
ಸರ್ಕಾರದ ಈ ಕ್ರಮವನ್ನು ಶಿಕ್ಷಕವರ್ಗ ಸ್ವಾಗತಿಸಿದೆ. ಆದರೆ ಅವರು ಈ ಸಭೆಯಗಳ ಯಶಸ್ಸಿನ ಕುರಿತಾಗಿ ಸಂದೇಹ ವ್ಯಕ್ತಪಡಿಸುತ್ತಾರೆ. "ಸಾಮಾನ್ಯವಾಗಿ ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳಿಸುವ ಪೋಷಕರು ಆರ್ಥಿಕವಾಗಿ ದುರ್ಬಲರಾಗಿರುತ್ತಾರೆ. ಅವರು ಶ್ರಮಜೀವಿಗಳು. ದಿನದ ಬಹುಪಾಲು ಕೆಲಸಗಳಲ್ಲಿ ತೊಡಗಿರುತ್ತಾರೆ. ಹಾಗಿರುವಾಗ ನಾವು ಅವರನ್ನು ಪೋಷಕ-ಶಿಕ್ಷಕರ ಸಭೆಗಾಗಿ ಆಹ್ವಾನಿಸಿದರೆ ಅವರ ಕೆಲಸಗಳನ್ನು ಬಿಟ್ಟು ಬರಲು ಸಾಧ್ಯವಾಗಲಿದೆಯೆ? ರಾಜರಾಜೇಶ್ವರಿ ನಗರದ ಸರ್ಕಾರಿ ಮಾದ್ಯಮಿಕ ಶಾಲಾ ಶಿಕ್ಷಕರೊಬ್ಬರು ಹೇಳಿದ್ದಾರೆ.
ಮಕ್ಕಳಿಗೆ ಡೈರಿ, ಪಾಸ್ಪೆಕ್ಟಸ್ ವಿತರಣೆ
ಖಾಸಗಿ ಶಾಲಾ ವಿದ್ಯಾರ್ಥಿಗಳಂತೆಯೇ ಸರ್ಕಾರಿ ಶಾಲಾ ಮಕ್ಕಳಿಗೂ ಸಹ 2018-19ರ ಶೈಕ್ಷಣಿಕ ವರ್ಷದಿಂದ ಡೈರಿಗಳು ಮತ್ತು ಪ್ರಾಸ್ಪೆಕ್ಟಸ್ ಗಳನ್ನು ವಿತರಿಸಲಾಗುತ್ತದೆ. ಇದಕ್ಕಾಗಿ ಡೈರಿಗಳ ಮುದ್ರಣಕ್ಕೆ ಆದೇಶಿಸಲಾಗಿದೆ ಎಂದು ಸಚಿವ ಸೇಟ್ ಹೇಳಿದ್ದಾರೆ. ಈ ಡೈರಿಗಳು ಶಿಕ್ಷಕರು ಹಾಗೂ ಪೋಷಕರಿಗೆ ಅನುಕೂಲಕರವಾಗಲಿದೆ. ಹಾಗೆಯೇ ಯಾವುದೇ ಮಗುವಿಗೆ ರಜೆ ಅಗತ್ಯವಾದರೆ ಇದೇ ಡೈರಿಯ ಮೂಲಕ ರಜೆ ಅರ್ಜಿ ಸಲ್ಲಿಕೆ ಮಾಡಬೇಕು ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT