ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಸ್ಟಮ್ಸ್ ಅಧಿಕಾರಿಗಳಿಂದ 93 ಲಕ್ಷ ಮೌಲ್ಯದ ಚಿನ್ನ ವಶ, ನಾಲ್ವರ ಬಂಧನ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಕಳೆದ ನಾಲ್ಕು ದಿನಗಳಲ್ಲಿ ನಾಲ್ವರನ್ನು ಬಂಧಿಸಿದ್ದಾರೆ.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಕಳೆದ ನಾಲ್ಕು ದಿನಗಳಲ್ಲಿ ನಾಲ್ವರನ್ನು ಬಂಧಿಸಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಿಂಡ 93 ಲಕ್ಷ ರೂ. ಮೌಲ್ಯದ ಚಿನ್ನವನ್ನು  ವಶಪಡಿಸಿಕೊಂಡಿದ್ದಾರೆ. 
ಬುಧವಾರ ದುಬೈನಿಂದ ಆಗಮಿಸಿದ್ದ ನಲಕಾಮ್ ಪರಂಬ ಮೊಹಮ್ಮದ್ ರಫೀಕ್ (27) ಎನ್ನುವವರಿಂದ 22.80 ಲಕ್ಷ ರೂಪಾಯಿ ಮೌಲ್ಯದ 728 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇದೇ ಬಗೆಯಲ್ಲಿ ಮಂಗಳವಾರ ಶಾರ್ಜಾದಿಂದ ಬೆಂಗಳೂರಿಗೆ ಆಗಮಿಸಿದ್ದ ಮುಸ್ತಫಾ ಪಳ್ಳಿಪುರಲ್ (38) ನಿಂದ  ರೂ 31.46 ಲಕ್ಷ ಮೌಲ್ಯದ 1003.56 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇನ್ನೊಂದು ಘಟನೆಯಲ್ಲಿ ಅದೇ ದಿನ ದುಬೈ ನಿಂದ ಆಗಮಿಸಿದ್ದ ಜಮಾಲುದೀನ್ (40) ನಿಂದ 31.35 ಲಕ್ಷ ರೂ. ಮೌಲ್ಯದ ಒಂದು ಕೆ.ಜಿ ಚಿನ್ನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಚಿನ್ನಾಭರಣ ಕಳ್ಳಸಾಗಣೆ ನಡೆಸಿದ ಆರೋಪದ ಮೇಲೆ ಕೋಳಿಕ್ಕೋಡ್ ಮೂಲದ ಶಂಶುದ್ದೀನ್(34)  ನನ್ನು ಭಾನುವಾರ ಬಂಧಿಸಿರುವ ಕಸ್ಟಮ್ ಅಧಿಕಾರಿಗಳು 6.80 ಲಕ್ಷ ಮೌಲ್ಯದ 217 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT