ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಸ್ಟಮ್ಸ್ ಅಧಿಕಾರಿಗಳಿಂದ 93 ಲಕ್ಷ ಮೌಲ್ಯದ ಚಿನ್ನ ವಶ, ನಾಲ್ವರ ಬಂಧನ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಕಳೆದ ನಾಲ್ಕು ದಿನಗಳಲ್ಲಿ ನಾಲ್ವರನ್ನು ಬಂಧಿಸಿದ್ದಾರೆ.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಕಳೆದ ನಾಲ್ಕು ದಿನಗಳಲ್ಲಿ ನಾಲ್ವರನ್ನು ಬಂಧಿಸಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಿಂಡ 93 ಲಕ್ಷ ರೂ. ಮೌಲ್ಯದ ಚಿನ್ನವನ್ನು  ವಶಪಡಿಸಿಕೊಂಡಿದ್ದಾರೆ. 
ಬುಧವಾರ ದುಬೈನಿಂದ ಆಗಮಿಸಿದ್ದ ನಲಕಾಮ್ ಪರಂಬ ಮೊಹಮ್ಮದ್ ರಫೀಕ್ (27) ಎನ್ನುವವರಿಂದ 22.80 ಲಕ್ಷ ರೂಪಾಯಿ ಮೌಲ್ಯದ 728 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇದೇ ಬಗೆಯಲ್ಲಿ ಮಂಗಳವಾರ ಶಾರ್ಜಾದಿಂದ ಬೆಂಗಳೂರಿಗೆ ಆಗಮಿಸಿದ್ದ ಮುಸ್ತಫಾ ಪಳ್ಳಿಪುರಲ್ (38) ನಿಂದ  ರೂ 31.46 ಲಕ್ಷ ಮೌಲ್ಯದ 1003.56 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇನ್ನೊಂದು ಘಟನೆಯಲ್ಲಿ ಅದೇ ದಿನ ದುಬೈ ನಿಂದ ಆಗಮಿಸಿದ್ದ ಜಮಾಲುದೀನ್ (40) ನಿಂದ 31.35 ಲಕ್ಷ ರೂ. ಮೌಲ್ಯದ ಒಂದು ಕೆ.ಜಿ ಚಿನ್ನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಚಿನ್ನಾಭರಣ ಕಳ್ಳಸಾಗಣೆ ನಡೆಸಿದ ಆರೋಪದ ಮೇಲೆ ಕೋಳಿಕ್ಕೋಡ್ ಮೂಲದ ಶಂಶುದ್ದೀನ್(34)  ನನ್ನು ಭಾನುವಾರ ಬಂಧಿಸಿರುವ ಕಸ್ಟಮ್ ಅಧಿಕಾರಿಗಳು 6.80 ಲಕ್ಷ ಮೌಲ್ಯದ 217 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT